ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ “ಆಜಾದಿ ಕಾ ಅಮೃತ ಮಹೋತ್ಸವದ” ಪ್ರಯುಕ್ತ ಮಿನಿ ಮ್ಯಾರಥಾನ್ ಸ್ವಾತಂತ್ರ್ಯದ ಓಟ

ಶೇರ್ ಮಾಡಿ

ನೇಸರ ಆ.06: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಮಿನಿ ಮ್ಯಾರಥಾನ್ ನಡೆಯಿತು.
ಈ ಓಟದಲ್ಲಿ ಪದವಿಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ ರಾಷ್ಟ್ರ ಪ್ರೇಮದ ಭಾವನೆಯನ್ನು ವ್ಯಕ್ತಪಡಿಸಿದರು. ಈ ಓಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕೆ ಯವರು ಚಾಲನೆಯನ್ನು ನೀಡಿದರು.

ಸ್ವಾತಂತ್ರದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದ ಈ ಓಟವು ಕಾಲೇಜಿನಿಂದ ಹಳೆನೇರಂಕಿಯ ವರೆಗೆ ಸಾಗಿ ಆ ನಂತರ ಮರಳಿ ಕಾಲೇಜಿನಲ್ಲಿ ಕೊನೆಯಾಯಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಭರತ್ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಕಾಲೇಜಿನ ಉಪನ್ಯಾಸಕ-ಉಪನ್ಯಾಸಕೇತರ ಸಿಬ್ಬಂದಿಗಳು ಸಹಕರಿಸಿದರು.

Leave a Reply

error: Content is protected !!