ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಶಾಂಕ್ ಗೋಖಲೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿರವರಿಗೆ ಸನ್ಮಾನ

ಶೇರ್ ಮಾಡಿ

ನೇಸರ ಡಿ.14: ಕಡಬ-ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ವಿತೀಯ ಸಾಧನೆಯನ್ನು ಗುರುತಿಸಿ ಡಿ.14 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಶಶಾಂಕ್ ಗೋಖಲೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
2020-21ನೇ ಸಾಲಿನಲ್ಲಿ ಸಂಘವು ರೂ.10.24 ಕೋಟಿ ಠೇವಣಿ ಹೊಂದಿದ್ದು,ರೂ.4.46 ಕೋಟಿ ಪಾಲು ಬಂಡವಾಳ ಹೊಂದಿದೆ. ರೂ.39.85 ಕೋಟಿ ಸಾಲ ಹೊರಬಾಕಿ ಇದ್ದು ವರ್ಷಾಂತ್ಯಕ್ಕೆ ಶೇ. 95.58 ಸಾಲ ಮರುಪಾವತಿಯಾಗಿರುತ್ತದೆ, ವರದಿ ಸಾಲಿನಲ್ಲಿ ದಾಖಲೆಯ ರೂ.105.03 ಲಕ್ಷ ಲಾಭ ಗಳಿಸಿ ಸಂಘದ ಸದಸ್ಯರಿಗೆ ಶೇ.12 ಲಾಭಂಶ ವಿತರಣೆ ಮಾಡಲಾಗಿದೆ,ಅಲ್ಲದೆ ಸಂಘವು ಉತ್ತಮ ಆಡಳಿತವನ್ನು ನಡೆಸಿ ಸದಸ್ಯರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿದೆ ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಯವರನ್ನು ಸನ್ಮಾನಿಸಲಾಗಿದೆ.

ವೇದಿಕೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕ ಶಶಿಕುಮಾರ್, ಕಡಬ-ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಜಯಚಂದ್ರ.ರೈ, ಶಿವಪ್ರಸಾದ್ ಪುತ್ತಿಲ, ಕುಶಾ ಕುಮಾರ ಮೊದಲಾದವರು ಉಪಸ್ಥಿತರಿದ್ದರು

Leave a Reply

error: Content is protected !!