ವಿಧಾನಸಭೆ ಅಧಿವೇಶನ: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 10 ಶಾಸಕರ ಅಮಾನತು; ಯಾರೆಲ್ಲಾ ಸದನದಿಂದ ಹೊರಕ್ಕೆ?

ಶೇರ್ ಮಾಡಿ

ವಿಧಾನಸಭೆ ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಮಂದಿ ಸದಸ್ಯರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.

ಬಿಜೆಪಿ ಸದಸ್ಯರಾದ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್, ಆರ್ ಅಶೋಕ್, ವೇದವಾಸ ಕಾಮತ್, ಯಶ್ ಪಾಲ್ ಸುವರ್ಣ, ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಅರವಿಂದ‌ ಬೆಲ್ಲದ, ಧೀರಜ್ ಮುನಿ ರಾಜ್, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.

ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಹಾಗೂ ನಡಾವಳಿ ನಿಯಮ 348 ಮೇರೆಗೆ ಅಮಾನತು ಮಾಡಲಾಗಿದೆ. ಈ ಪ್ರಸ್ತಾವಕ್ಕೆ ಸ್ಪೀಕರ್ ಖಾದರ್ ಅಂಗೀಕಾರ ನೀಡಿದರು ಹಾಗೂ ಸದಸ್ಯರನ್ನು ಸದನದಿಂದ‌ ಹೊರಗೆ ಹೋಗುವಂತೆ ಸೂಚಿಸಿದರು.

ಅಧಿವೇಶನದಲ್ಲಿ ಏನಾಯ್ತು?
ಬೆಂಗಳೂರಿನಲ್ಲಿ ಮಂಗಳವಾರ ನಡೆದ ವಿಪಕ್ಷ ಒಕ್ಕೂಟದ ಸಭೆಗೆ ಆಗಮಿಸಿದ್ದ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದನ್ನು ವಿರೋಧಿಸಿದ ಸದನದಲ್ಲಿ ಧರಣಿ ನಡೆಸಿತ್ತು. ಧರಣಿ ನಡುವೆಯೇ ಮಸೂದೆಗಳನ್ನು ಪಾಸ್ ಮಾಡಲಾಗಿದೆ. ಈ ವೇಳೆ ಭೋಜನ ವಿರಾಮಕ್ಕೆ ಅವಕಾಶ ನೀಡದೆ ಸದನ ಮುಂದುವರಿದ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಪೀಠದಲ್ಲಿ ಇದ್ದ ಉಪ ಸ್ಪೀಕರ್ ಮೇಲೆ ಬಿಲ್ ಪ್ರತಿಯನ್ನು ಹರಿದು ಎಸೆದಿದ್ದರು. ಈ ನಿಟ್ಟಿನಲ್ಲಿ ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ ಒಂಬತ್ತು ಸದಸ್ಯನ್ನು ಅಮಾನತು ಮಾಡಲಾಗಿದೆ.

ಇದೇ ವಿಚಾರವಾಗಿ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ರಾಜಕೀಯ ಅಸ್ತಿತ್ವಕ್ಕಾಗಿ ಗಲಾಟೆ ಮಾಡುವುದು ಸರಿಯಲ್ಲ. ಪೀಠದ‌ ಗೌರವ ಉಳಿಸುವ ಕೆಲಸ ಆಗಬೇಕು. ಸದಸ್ಯರ ಮಾತುಗಳನ್ನು ಕೇಳಲು ನಾವು ಸಿದ್ದ. ಪೀಠಕ್ಕೆ ಅಗೌರವ ತೋರಿಸುವ ಮೂಲಕ ಕಪ್ಪು ಚುಕ್ಕೆ. ಮತದಾರರಿಗೆ ಹೆಮ್ಮೆ ತರುವ ಕೆಲಸ ಮಾಡಬೇಕು. ರಾಜ್ಯದ ಜನರು ನಿಮ್ಮನ್ನು‌ ಸಹಿಸುದಿಲ್ಲ ಎಂದರು.

ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ. ಸ್ಪೀಕರ್ ಸ್ಥಾನವನ್ನು ದುರುಪಯೋಗ ಮಾಡುವ ಪ್ರಯತ್ನ ಮಾಡುತ್ತಿದೆ‌- ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು

Leave a Reply

error: Content is protected !!