ಪ್ರಸಿದ್ದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಲಾಂಛನ -ಬಿಡುಗಡೆ

ಶೇರ್ ಮಾಡಿ

ನೇಸರ 22: ಪ್ರಸಿದ್ದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು, ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮದ್ಯ ಭಾಗವನ್ನು ಅಲಂಕರಿಸಿದೆ. ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಚಾರ್ಯ ಪುತ್ತೂರು ಅವರು ವೃತಾಧಾರಿಯಾಗಿ ಈ ಲಾಂಛನವನ್ನು ಬಿಡಿಸಿದ್ದಾರೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಂಸದ ನಳೀನ್ ಕುಮಾರ್ ಕಟೀಲ್ ಲಾಂಛನವನ್ನು ಅನಾವರಣಗೊಳಿಸಿದ್ದರು. ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮಧ್ಯ ಭಾಗವನ್ನು ಅಲಂಕರಿಸಿದೆ. ಇಕ್ಕೆಲದಲ್ಲಿ ಷಣ್ಮುಖನ ವಾಹನವಾದ ನವಿಲಿನ ಗರಿಯನ್ನು ಚಿತ್ರೀಕರಿಸಲಾಗಿದೆ. ಅಲ್ಲದೆ ಲಾಂಛನದ ಸುತ್ತಲೂ ಕನ್ನಡ, ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಎಂಬ ಕೆತ್ತನೆ ಇದೆ. ಮುಂದೆ ರಥಬೀದಿಯಲ್ಲಿ ನಿರ್ಮಿತವಾಗುವ ಪಾರಂಪರಿಕ ಕಲ್ಲಿನ ಕಟ್ಟಡದಲ್ಲಿ ಲಾಂಛನವನ್ನು ಕಲ್ಲಿನಿಂದ ಕೆತ್ತನೆ ಮಾಡಿ ಅನಾವರಣಗೊಳಿಸಲು ಆಡಳಿತ ಮಂಡಳಿಯು ಚಿಂತನೆ ನಡೆಸಿದೆ. ದೇವಳದ ವೆಬ್‌ಸೈಟ್‌ನಲ್ಲಿ ಇನ್ನು ಮುಂದೆ ಈ ಲಾಂಛನವು ಪ್ರಧಾನವಾಗಿ ಗೋಚರಿಸಲಿದೆ. ಇದರಿಂದಾಗಿ ಶ್ರೀ ದೇವಳದ ವೆಬ್‌ಸೈಟ್ ಅನ್ನು ಭಕ್ತರು ಸುಲಲಿತವಾಗಿ ಕಂಡು ಹಿಡಿಯಲು ಸಹಕಾರಿಯಾಗಲಿದೆ. ಶ್ರೀ ದೇವಳದ ಸೇವೆಗಳು ಮತ್ತು ಆಡಳಿತ ವ್ಯವಸ್ಥೆಯು ಅಂತರ್ಜಾಲ ಕೇಂದ್ರಿತವಾಗಲಿದೆ. ಇ-ಆಡಳಿತ ಮತ್ತು ಇ-ಸೇವೆಗೆ ಉಪಯುಕ್ತವಾಗುವ ದೃಷ್ಠಿಕೋನದಿಂದ ಆಡಳಿತ ಮಂಡಳಿ ಶ್ರೀ ದೇವಳದ ನೂತನ ಲಾಂಛನವನ್ನು ಅನಾವರಣಗೊಳಿಸಿದೆ. ಮುಂದೆ ಎಲ್ಲಾ ಸೇವೆಗಳ ವಿವರ ಇತ್ಯಾದಿಗಳು ಬರುವ ಕಾರಣ ಕುಕ್ಕೆ ದೇವಳದ ಬಗ್ಗೆ ತಿಳಿದುಕೊಳ್ಳಲು ಈ ಲಾಂಛನ ಪೂರಕವಾಗಿ ಸಹಕರಿಸಲಿದೆ


ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಚಾರ್ಯ ಪುತ್ತೂರು ಅವರು ಈ ಲಾಂಛನವನ್ನು ವೃತಾಧಾರಿಯಾಗಿ 10 ದಿನ ವ್ಯಯಿಸಿ ಕೈಯಲ್ಲೇ ಬಿಡಿಸಿದ್ದಾರೆ. ತನ್ನ 5ನೇ ವರ್ಷದಲ್ಲಿ ಕೃಷ್ಣ ಜನ್ಮಾಷ್ಠಮಿಗೆ ಬಿಡಿಸಿದ ಕೃಷ್ಣನ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಆಗಿನ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಂದ ಪಡೆದ ಇವರು, ಇದೇ ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯನ್ನೂ ಗಳಿಸಿದ್ದರು. 15 ರಾಷ್ಟ್ರೀಯ ಪುರಸ್ಕಾರ, 5 ಅಂತರಾಷ್ಟ್ರೀಯ ಪ್ರಶಸ್ತಿಯೊಂದಿಗೆ 250ಕ್ಕೂ ಅಧಿಕ ಪುರಸ್ಕಾರಗಳನ್ನು ಪಡೆದಿದ್ದಾರೆ.

Leave a Reply

error: Content is protected !!