ಗಂಡಿಬಾಗಿಲು ಸಿಯೋನ್ ಆಶ್ರಮ: ಗಾಂಧಿಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

ಶೇರ್ ಮಾಡಿ

ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ಗಾಂಧಿಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‍ ರವರು ವಹಿಸಿ ಗಾಂಧೀಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಬದುಕೋಣ. ಹಿರಿಯರನ್ನು ಗೌರವಿಸಿ, ನೆಮ್ಮದಿಯ ಬದುಕು ಕಲ್ಪಿಸಿಕೊಡುವುದರಿಂದ ಮಾನವ ಜನ್ಮ ಸಾರ್ಥಕವಾಗಿಸ ಬಹುದೆಂದರು.ಹಿರಿಯ ನಾಗರಿಕರ ದಿನಾಚರಣೆಯನ್ನುಆಚರಿಸುವ ಪ್ರಾಮುಖ್ಯತೆ ವಿವರಿಸಿದರು ಹಾಗೂ ಸಿಯೋನ್ ಆಶ್ರಮದಲ್ಲಿ ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೇ ಬೇರೆ ಬೇರೆ ಧರ್ಮದ ಮೂವರು ಹಿರಿಯ ನಾಗರೀಕರನ್ನು ಗುರುತಿಸಿ, ಪ್ರತಿ ವರ್ಷ ಸನ್ಮಾನಿಸಲಾಗುವುದೆಂದು ತಿಳಿಸಿದರು.

ನೆರಿಯ ಗ್ರಾಮದ ಹಿರಿಯ ನಾಗರಿಕರಾದ ಸಿ.ವಿ.ಚಾಂಡಿ ಚೆರಙಗರ ಪುತ್ತನ್‍ಪುರ, ಶ್ರೀಮತಿ ನಾಗಮ್ಮ ಉಂಬಾಜೆ ಹಾಗೂ ಕಕ್ಕಿಂಜೆಯ ಸಿ.ಜೆ.ಅಹಮ್ಮದ್ ಕುಂಞ ಇವರುಗಳನ್ನು ಸನ್ಮಾನಿಸಲಾಯಿತು.

ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿಯು.ಪಿ.ಯವರು ಹಾಗೂ ಆಶ್ರಮ ನಿವಾಸಿಯಾದ ಉಮೇಶ್‍ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಸಿಯೋನ್ ಆಶ್ರಮದ ಹಿರಿಯ ನಾಗರಿಕರಿಗೆ ಒಳಾಂಗಣ ಆಟಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸಿಯೋನ್ ಆಶ್ರಮದ ಸಂಧ್ಯಾ ಸುಭಾಷ್‍ರವರು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ದಿನವತಿ ಸ್ವಾಗತಿಸಿ, ಶ್ರೀಮತಿ ಶೋಭಾ ಯು.ಪಿ.ನಿರೂಪಿಸಿದರು.

Leave a Reply

error: Content is protected !!