ರೇಷನ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಪಡಿತರ ಚೀಟಿ ಇರುವ ಎಲ್ಲರಿಗೂ ಈ ಅವಕಾಶ ನೀಡಿದ ರಾಜ್ಯ ಸರ್ಕಾರ

ಶೇರ್ ಮಾಡಿ

ಪಡಿತರ ಚೀಟಿ ಹೊಂದಿರುವವರಿಗೆ ಗುಡ್ ನ್ಯೂಸ್ ಇದೆ. ರೇಷನ್‌ ಕಾರ್ಡ್‌ ತಿದ್ದುಪಡಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಮೂಲಕ ಪಡಿತರ ಚೀಟಿದಾರರು ತಮ್ಮ ದಾಖಲೆಯನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ರೇಶನ್ ಕಾರ್ಡ್ ತಿದ್ದುಪಡಿಗೆ ಅವಕಾಶ :
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದಪಡಿಗೆ ಅವಕಾಶ ನೀಡುವಂತೆ ಸಾರ್ವಜನಿಕರಿಂದ ಮನವಿ ಕೇಳಿ ಬಂದಿತ್ತು. ಈ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ರೇಶನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆಅವಕಾಶ ಕಲ್ಪಿಸಲಾಗಿದೆ.

ಹಂತ-ಹಂತವಾಗಿ ತಿದ್ದುಪಡಿಗೆ ಅವಕಾಶ :
ಇನ್ನು ಸರ್ವರ್‌ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆ ಈ ಬಾರಿ ಹಂತ-ಹಂತವಾಗಿ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಎರಡು ಬಾರಿ ರೇಶನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದಾಗಲೂ ಸರ್ವರ್ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಹಂತ ಹಂತವಾಗಿ ಅವಕಾಶ ಕಲ್ಪಿಸಲಾಗಿದೆ.

ಎಲ್ಲಿ ಮಾಡಿಸಬಹುದು ತಿದ್ದುಪಡಿ ? :
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು.

ಏನೇನು ತಿದ್ದುಪಡಿ ಮಾಡಬಹುದು ? :
-ಫಲಾನುಭವಿ ಹೆಸರು ಬದಲಾವಣೆ

  • ಪಡಿತರ ಕೇಂದ್ರ ಬದಲಾವಣೆ
  • ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ ಮಾಡುವುದು
  • ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಬಹುದಾಗಿದೆ

ಮಹಿಳೆಯನ್ನು ಮನೆಯ ಯಜಮಾನಿ ಎಂದು ಹೆಸರು ಬದಲಾವಣೆ ಮಾಡಲು ಬಯಸುವವರು ಈ ಸಂದರ್ಭದಲ್ಲಿ ಮಾಡಿಕೊಳ್ಳಬಹುದಾಗಿದೆ.

ಪಡಿತರ ವಿತರಕರ ಬೇಡಿಕೆ :
ಈ ಮಧ್ಯೆ, ಕಮಿಷನ್ ಹಣಕ್ಕೆ ಆಗ್ರಹಿಸಿ ನವೆಂಬರ್ 7ರ ವರೆಗೂ ಪಡಿತರ ವಿತರಿಸದಿರಲು ಪಡಿತರ ವಿತರಕರೂ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಡಿತರ ಅಂಗಡಿ ಬಂದ್ ಮಾಡಲು ತೀರ್ಮಾನಿಸಲಾಗಿದೆ.
ಪಡಿತರ ವಿತರಕರಿಂದ‌ ನವೆಂಬರ್ 7ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಫೇರ್‌ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್ ಸಭೆಯಲ್ಲಿ ತಿರ್ಮಾನದಂತೆ ಪ್ರತಿಭಟನೆ ನಡೆಯಲಿದೆ.

ಬೇಡಿಕೆಗಳು ಏನು? :
-ಇ ಕೆ ವೈ ಸಿ ಕೆಲಸ ನಿರ್ವಹಿಸಿದ 23.75 ಕೋಟಿ ಸಹಾಯಧನ ಕೂಡಲೇ ಬಿಡುಗಡೆ ಮಾಡುವುದು
-ಗೋವಾ ಕೇರಳ ಮಹಾರಾಷ್ಟ ರಾಜ್ಯದಲ್ಲಿ ಕೊಡುತ್ತಿರುವ ಕಮಿಷನ್ ಹಾಗೆ ಕರ್ನಾಟಕದಲ್ಲೂ ಕಮಿಷನ್ ಕೊಡಬೇಕು
-ಕ್ವಿಂಟಲ್ ಗೆ 250 ರೂ. ಯಂತೆ ಕಮಿಷನ್ ಜಾರಿಗೆ ಸರ್ಕಾರ ಆದೇಶ ಹೊರಡಿಸಬೇಕು
-ಮಾಲೀಕರು ಮೃತಪಟ್ಟರೆ ಅವರ ಕುಟುಂಬಕ್ಕೆ ನೆರವು ನೀಡಬೇಕು
-ಸರ್ವರ್ ಸಮಸ್ಯೆ ಇರುವುದರಿಂದ ಪ್ರತಿ ಜಿಲ್ಲೆಗೂ ಪ್ರತ್ಯೇಕ ಸರ್ವರ್ ಸೆಂಟರ್ ಕಲ್ಪಿಸಬೇಕು
-ಐದು ಕೆ. ಜಿ ಅಕ್ಕಿ ಹಣವನ್ನು DBT ಮಾಡುವ ಬದಲು ಬೇರೆ ಆಹಾರ ಪದಾರ್ಥಗಳನ್ನು ನೀಡಬೇಕು
-DBT ಮೂಲಕವೇ ಕಮಿಷನ್ ಹಣವನ್ನು ಪಡಿತರ ವಿತರಕರಿಗೆ ನೀಡಬೇಕು.

Leave a Reply

error: Content is protected !!