ಕಾಯರ್ತಡ್ಕ: ಬಿಜೆಪಿ ಯುವ ನಾಯಕ ರಾಜೇಶ್ ನಿಡ್ಡಾಜೆ ಮೇಲೆ ಮಾರಾಕಾಯುಧದಿಂದ ಹಲ್ಲೆ

ಶೇರ್ ಮಾಡಿ

ಕೊಕ್ಕಡ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ(33) ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ಮಾರಾಕಾಯುಧದಿಂದ ಹಲ್ಲೆ ನಡೆದಿದೆ.

ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ.

ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ‌ ದಾಳಿ‌ ನಡೆಸಲಾಗಿದೆ. ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಸ್ಪತ್ರೆಗೆ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ವಸಂತ್ ಅಚಾರ್ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ‌.‌

Leave a Reply

error: Content is protected !!