ಕಡಬ : ಹಿಂದೂ ಸಾಮ್ರಾಜ್ಯ ದಿನ ಆಚರಣೆ

ಶೇರ್ ಮಾಡಿ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಪಟ್ಟಾಭಿಷೇಕದ ದಿನದ ಪ್ರಯುಕ್ತ ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು.

ಸರಸ್ವತಿ ವಿದ್ಯಾ ಸಂಸ್ಥೆಗಳ ಕೋಶಾಧಿಕಾರಿ ಲಿಂಗಪ್ಪ.ಜೆ. ಅವರು ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಶಾಲಾ 7ನೇ ತರಗತಿ ವಿದ್ಯಾರ್ಥಿ ಸಾಕ್ಷಾತ್ ಅವರು ಹಿಂದೂ ಸಾಮ್ರಾಜ್ಯ ದಿನದ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ವೇತ ಕೋಡಿಂಬಾಲ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶೈಲಶ್ರೀ ಎಸ್.ರೈ ಉಪಸ್ಥಿತರಿದ್ದರು.

Leave a Reply

error: Content is protected !!