ಕೊಕ್ಕಡ: ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ನಿಧನ

ಶೇರ್ ಮಾಡಿ

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ.

ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ವಾಸವಾಗಿದ್ದ ಚಕ್ರ ಬಹಾದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ(44ವ.) ಮೃತಪಟ್ಟವರು. ಇವರು ಜೂ.11ರಂದು ಸಂಜೆ ಅಡುಗೆ ಮಾಡುವ ಸಲುವಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ತರದ ಸುಟ್ಟಗಾಯ ಉಂಟಾಗಿತ್ತು. ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ.18ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಚಕ್ರ ಬಹದ್ದೂರು ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!