ಒಂಟಿಯಾಗಿ ಮನೆಯಲ್ಲಿ ವಾಸವಿದ್ದ ಯುವಕ ಆತ್ಮಹತ್ಯೆ

ಶೇರ್ ಮಾಡಿ

ಒಂಟಿಯಾಗಿ ಮನೆಯಲ್ಲಿ ವಾಸವಾಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಬೆಳಗ್ಗೆ ಪುತ್ತೂರು ತಾಲೂಕಿನ ಆರ್ಯಾಪು ಎಂಬಲ್ಲಿ ನಡೆದಿದೆ.

ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ವಾಸವಿದ್ದ ವಿಶ್ವನಾಥ(32) ಆತ್ಮಹತ್ಯೆ ಮಾಡಿಕೊಂಡ ಯುವಕ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿದ್ದಾರೆ.

Leave a Reply

error: Content is protected !!