ನೆಲ್ಯಾಡಿ ಸಂತ ಜಾರ್ಜ್ ಪ್ರೌಢಶಾಲೆ ಕಬಡ್ಡಿ ಪಂದ್ಯದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ಕಾಂಚನ ಶ್ರೀಲಕ್ಷ್ಮೀ ನಾರಾಯಣ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯ ಅತಿಥ್ಯದಲ್ಲಿ ನಡೆದ ಉಪ್ಪಿನಂಗಡಿ ವಲಯದ ಬಾಲಕಿಯರ ವಿಭಾಗ ಮಟ್ಟದ ಕಬಡ್ಡಿ ಪಂದ್ಯದಲ್ಲಿ ನೆಲ್ಯಾಡಿಯ ಸಂತ ಜಾರ್ಜ್ ಪ್ರೌಢಶಾಲೆಯು ಪ್ರಥಮ ಸ್ಥಾನಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತ ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ಮಹಮ್ಮದ್ ಹ್ಯಾರಿಸ್ ಅವರು ತರಬೇತಿ ನೀಡಿದ್ದರು. ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ, ಸಂಚಾಲಕರು ಹಾಗೂ ಶಿಕ್ಷಕ ವೃಂದದವರು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

Leave a Reply

error: Content is protected !!