ನೆಲ್ಯಾಡಿ: ಓಣಂ ಹಬ್ಬದ ಪ್ರಯುಕ್ತ ಮಲಯಾಳಿ ವಿಶ್ವಕರ್ಮ ಸಮಾಜ ಬಾಂಧವರ ಕ್ರೀಡಾಕೂಟ

ಶೇರ್ ಮಾಡಿ

ನೆಲ್ಯಾಡಿ ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್ ಇದರ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಸಮಾಜ ಬಾಂಧವರಿಗೆ ಕ್ರೀಡಾಕೂಟ ಸೆ.8ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.

ವೇಲು ಆಚಾರಿ ನೆರಿಯ ಕ್ರೀಡಾಕೂಟ ಉದ್ಘಾಟಿಸಿದರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್ ಅವರು ಮಲಯಾಳಿ ವಿಶ್ವಕರ್ಮ ಸೇವಾ ಟ್ರಸ್ಟ್‌ನ ಲಕ್ಕಿಡಿಪ್ ಉದ್ಘಾಟಿಸಿದರು. ಟ್ರಸ್ಟ್‌ನ ಅಧ್ಯಕ್ಷ ಸಜಿ ನೆಲ್ಯಾಡಿ, ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಮಧುಸೂದನ್ ನೆರಿಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೆಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಶಾಂತಿಕೃಷ್ಣ ಕುಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿಶ್ವಕರ್ಮ ಸೇವಾ ಟ್ರಸ್ಟ್‌ನ ನಿರ್ದೇಶಕರು ಉಪಸ್ಥಿತರಿದ್ದರು.

ರಾಜನ್ ಪಡ್ಡಡ್ಕ ಪ್ರಾರ್ಥಿಸಿದರು, ಟ್ರಸ್ಟ್‌ನ ಕಾರ್ಯದರ್ಶಿ, ನೆಲ್ಯಾಡಿ ಗ್ರಾ.ಪಂ.ಉಪಾಧ್ಯಕ್ಷೆ ರೇಷ್ಮಾಶಶಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ವಿನೋದ್ ಮರ್ದಾಳ ವಂದಿಸಿದರು. ವಿನೋದ್ ಕಕ್ಕಿಂಜೆ ಕ್ರೀಡಾಕೂಟ ನಿರ್ವಹಿಸಿದರು. ವಿಶ್ವಕರ್ಮ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

error: Content is protected !!