ನೆಲ್ಯಾಡಿ ಬೆಥನಿ ಐಟಿಐಯಲ್ಲಿ ಅಭಿಯಂತರ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಭಿಯಂತರ ದಿನಾಚರಣೆಯು ಸೆ.18ರಂದು ನಡೆಯಿತು.

ಸಂಸ್ಥೆಯ ನಿರ್ದೇಶಕ ರೆ.ಫಾ.ಜೈಸನ್ ಸೈಮನ್ ಒಐಸಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಉತ್ತಮ ವ್ಯಕ್ತಿತ್ವ ಹಾಗೂ ವರ್ತನೆ ಮನುಷ್ಯನನ್ನು ಉತ್ತುಂಗಕ್ಕೇರಿಸುತ್ತದೆ ಎಂಬ ಹಿತನುಡಿಗಳನ್ನಾಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಅತಿಥಿ ಮತ್ತು ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡಲಾಯಿತು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸುಬ್ರಾಯ ನಾಯಕ್, ಸಿ ಎಂ ವಿಶ್ವೇಶ್ವರಯ್ಯನವರ ಕುರಿತಾದ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಕಂಪ್ಯೂಟರ್ ವಿಭಾಗದ ಸುನಿಲ್ ಜೋಸೆಫ್, ಎಂ ವಿಶ್ವೇಶ್ವರಯ್ಯರ ಕುರಿತಾದ ಸಾಕ್ಷ ಚಿತ್ರದ ಪ್ರದರ್ಶನವನ್ನು ನಡೆಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರ ಜೊತೆಗೆ ಪ್ರಾಚಾರ್ಯ ಸಜಿ.ಕೆ ತೋಮಸ್ ಹಾಗೂ ತರಬೇತಿ ಅಧಿಕಾರಿ ಜಾನ್.ಪಿ.ಎಸ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಹರಿಪ್ರಸಾದ್.ರೈ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Leave a Reply

error: Content is protected !!