ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

ಶೇರ್ ಮಾಡಿ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರ ಕೇವಳ ಕಡಬ ಇಲ್ಲಿ ವಿಶ್ವ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಕಡಬದ ಉದ್ಯಮಿ ಮಹೇಂದ್ರ ಚೌಧರಿಯವರು ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಕನ್ನಡ, ಆಂಗ್ಲ ಭಾಷೆಯ ಜೊತೆಯಲ್ಲಿ ನಾವು ನಮ್ಮ ರಾಷ್ಟ್ರಭಾಷೆಯಾದ ಹಿಂದಿಯನ್ನು ಅಭ್ಯಾಸ ಮಾಡಬೇಕು. ಹಿಂದಿ ಭಾಷೆಯನ್ನು ಎಲ್ಲರೂ ಮಾತನಾಡುವಂತಾಗಬೇಕು ಎಂದರು.

ಶಾಲಾ ಆಡಳಿತ ಮಂಡಳಿಯ ಸದಸ್ಯೆ ಪ್ರಮೀಳಾ ಲೋಕೇಶ್ ಅವರು ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಸಹಕರಿಸಿದ ಅನೇಕ ಮಹಾನ್ ವ್ಯಕ್ತಿಗಳನ್ನು ನೆನಪಿಸಿಕೊಂಡರು. ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಭಾಷೆ ಕೇವಲ ಅಂಕಕ್ಕೆ ಸೀಮಿತವಾದುದಲ್ಲ. ಅದರಲ್ಲಿ ಪ್ರಬುದ್ಧತೆಯನ್ನು ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ, ಮುಖ್ಯಶಿಕ್ಷಕಿ ಶ್ವೇತಾ, ಹಿಂದಿ ಶಿಕ್ಷಕಿ ಮಮತಾ.ಎಸ್. ಅವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಶಾಲಾ 8ನೇ ತರಗತಿ ವಿದ್ಯಾರ್ಥಿ ಯೋಗೇಂದ್ರ ಬಿ.ಎಸ್. ಸ್ವಾಗತಿಸಿದರು, 9ನೇ ತರಗತಿ ವಿದ್ಯಾರ್ಥಿನಿ ಮನಸ್ವಿ ವಂದಿಸಿದರು. 9ನೇ ತರಗತಿ ವಿದ್ಯಾರ್ಥಿ ಸುಮಂತ್ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

error: Content is protected !!