ತ್ರಿಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಕಳ್ಳತನ

ಶೇರ್ ಮಾಡಿ

ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರುಸಾವಿರಕ್ಕೂ ಹೆಚ್ಚು ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಮದ್ಯದ ಬಾಟ್ಲಿಗಳನ್ನೂ ಕಳ್ಳತನ ಮಾಡಲಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಹಾಗೂ ಪೊಲೀಸ್ ನಾಯಿಯನ್ನು ತರಿಸಿ ಪರಿಶೀಲನೆ ನಡೆಸಲಾಗಿದೆ. ಕಳ್ಳತನದ ದೃಶ್ಯಗಳು ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅದನ್ನು ಪರಿಶೀಲಿಸಲಾಗುತ್ತಿದೆ.

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿಯೂ ಕಳ್ಳತನ ನಡೆದಿದೆ. ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿದ ಕಳ್ಳರು ಅಲ್ಲಿಂದ ಸುಮಾರು 6000ದಷ್ಟು ನಗದನ್ನು ಅಪಹರಿಸಿದ್ದಾರೆ. ಇಲ್ಲಿಯು ದೃಶ್ಯಗಳು ಸಿ.ಸಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ. ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎರಡೂ ಕಳ್ಳತನವನ್ನು ಒಂದೇ ತಂಡ ನಡೆಸಿರುವ ಅನುಮಾನ ವ್ಯಕ್ತವಾಗುತ್ತಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

error: Content is protected !!