

ಕಾರ್ಕಳ: ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ.
2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ವಿದ್ಯುತ್ ಶಾರ್ಟ್ ಸರ್ಕೂಟ್ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.













