

ನೆಲ್ಯಾಡಿ: ಜಾಗತಿಕ ಮಟ್ಟದಲ್ಲಿ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಗಟ್ಟುವ ಧ್ಯೇಯ ವಾಕ್ಯದೊಂದಿಗೆ ಗುರುವಾರದಂದು ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಕಬ್ಸ್-ಬುಲ್ ಬುಲ್, ಸ್ಕೌಟ್ ಮತ್ತು ಗೈಡ್ಸ್ ತಂಡದ ವತಿಯಿಂದ ವಿಶ್ವಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯ ಡಾ.ವರ್ಗೀಸ್ ಕೈಪನಡ್ಕ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಹಾಗೂ ಸಮಾಜದ ಪ್ರತಿಯೊಬ್ಬರು ಪರಿಸರದ ಅರಿವು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಶಾಲಾ ಪರಿಸರದ ಸ್ವಚ್ಛತೆ, ಕೈತೋಟಗಳ ನಿರ್ವಹಣೆ ಮತ್ತು ಗಿಡ ನೆಡುವುಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. “ಈ ರೀತಿಯ ಚಟುವಟಿಕೆಗಳ ಮೂಲಕ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮುಂದಿನ ಪೀಳಿಗೆಗೆ ಸದೃಢವಾದ ಸಂದೇಶವನ್ನು ನೀಡಬೇಕು,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ರೆ.ಫಾ.ಜೈಸನ್ ಸೈಮನ್, ಉಪ ಪ್ರಾಚಾರ್ಯರಾದ ಜೋಸ್ ಎಂ.ಜೆ, ಉಪನ್ಯಾಸಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ, ಕಬ್ಸ್-ಬುಲ್ ಬುಲ್, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವಿವಿಧ ಬಗೆಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪವನ್ನು ಪುನರಾಪಿಸಿದರು.













