

ನೆಲ್ಯಾಡಿ: ಉದ್ಯೋಗ ಖಾತರಿ ಯೋಜನೆಯ 5.20 ಲಕ್ಷ ರೂ. ಅನುದಾನ ಹಾಗೂ ಗ್ರಾಮ ಪಂಚಾಯತ್ನ ಸ್ವಂತ ನಿಧಿಯನ್ನು ಬಳಸಿಕೊಂಡು, ನೆಲ್ಯಾಡಿ ಬೆಥನಿ ಸಂಸ್ಥೆಯ ಹಿಂಬದಿ ಹೊಸ ಸ್ಮಶಾನ ನಿರ್ಮಾಣಕ್ಕೆ ಜು.8ರಂದು ಗುದ್ದಲಿಪೂಜೆ ನೆರವೇರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಸಲಾಂ ಬಿಲಾಲ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಉಷಾ ಜೋಯಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್, ಗುತ್ತಿಗೆದಾರ ಶಿವಪ್ರಕಾಶ್ ಬೀದಿಮಜಲು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಅಂಗು ಸ್ವಾಗತಿಸಿದರು.










