

ಕೊಕ್ಕಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು, ಬಾಲ ವಿಕಾಸ ಸಮಿತಿ ಪಟ್ಲಡ್ಕ, ಶ್ರೀ ಶಕ್ತಿ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘ ಪಟ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಲಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ಜರುಗಿತು.
ಸಭಾ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪಿ ಪಟ್ಲಡ್ಕ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆ ಕಡಬ ತಾಲ್ಲೂಕು ನೆಲ್ಯಾಡಿ ವಲಯದ ಮೇಲ್ವಿಚಾರಕಿ ನಾಗವೇಣಿ, ಸೌತಡ್ಕ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ, ಹಿರಿಯರಾದ ಜೋನ್ ಕುವೆಲ್ಲೊ, ಅಬ್ದುಲ್ಲ, ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ದೀಕ್ಷಾ ಸಾಲ್ಯಾನ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಕಾಶ್ ರೈ ಪಟ್ಲಡ್ಕ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಸನ್ಮಾನ:
ಕೌಕ್ರಾಡಿ ಗ್ರಾಮ ಪಂಚಾಯಿತಿನ ಸದಸ್ಯ ಮಹೇಶ್ ಪಿ ಪಟ್ಲಡ್ಕ, ಪ್ರದೀಪ್ ಪಟ್ಲಡ್ಕ ಹಾಗೂ ಚಿತ್ರಕಲಾ ಶಿಕ್ಷಕ ವಿನೋದ್ ಪಿಲತ್ತಿಂಜ ಇವರನ್ನು ಸಮಿತಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕರು ಹಾಗೂ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಆಶಾ ಆಲೀಸ್ ವರದಿ ವಾಚಿಸಿದರು, ಹಳೆ ವಿದ್ಯಾರ್ಥಿ ಸಂಘದ ಜೊತೆಕಾರ್ಯದರ್ಶಿ ಪ್ರೇಮ ಪಟ್ಲಡ್ಕ ಸ್ವಾಗತಿಸಿದರು, ರಾಧಿಕಾ ಪಟ್ಲಡ್ಕ ಕಾರ್ಯಕ್ರಮ ನಿರೂಪಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಲತಾ ವಂದಿಸಿದರು.






