






ನೆಲ್ಯಾಡಿ:ದೊಂತಿಲ ಶ್ರೀ ಮಹಾವಿಷ್ಣುಮೂರ್ತಿ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಅರ್ಚಕರಾಗಿದ್ದ ನೆಲ್ಯಾಡಿ ಗ್ರಾಮದ ಕರಂಬಿತ್ತಿಲು ನಿವಾಸಿ ಜಗದೀಶ ರಾವ್(67) ಅವರು ಅಲ್ಪಕಾಲದ ಅನಾರೋಗ್ಯದಿಂದ ಮೇ 25ರಂದು ಸ್ವಗೃಹದಲ್ಲಿ ನಿಧನರಾದರು.
ಧಾರ್ಮಿಕ ಹಾಗೂ ವೈದಿಕ ಕಾರ್ಯಗಳಲ್ಲಿ ಸಹಾಯಕರಾಗಿ ಅಪಾರ ಅನುಭವ ಹೊಂದಿದ್ದ ಅವರು ಹಲವು ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದರು. ದೊಂತಿಲ ಶ್ರೀಮಹಾವಿಷ್ಣುಮೂರ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಜಗದೀಶ ರಾವ್ ಅವರು ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿಯೂ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು. ವೈದಿಕ ಕಾರ್ಯಗಳಲ್ಲಿ ಸಹಾಯಕರಾಗಿ ಎಲ್ಲರೊಂದಿಗೆ ಚಿರಪರಿಚಿತರಾಗಿದ್ದರು.
ಮೃತರು ಪತ್ನಿ ನಿರದಾ, ಪುತ್ರ ಸುದರ್ಶನ ಹಾಗೂ ಪುತ್ರಿ ಸುಪ್ರಿಯ ಅವರನ್ನು ಅಗಲಿದ್ದಾರೆ.


