






ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಕಡಬ ತಾಲೂಕು, ನೆಲ್ಯಾಡಿ ವಲಯದ ಭಜನಾ ಪರಿಷತ್ತಿನ ಸಭೆಯು ನೆಲ್ಯಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೆಲ್ಯಾಡಿ ವಲಯದ ಭಜನಾ ಪರಿಷತ್ತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಪ್ರಿತಾ ರವಿಚಂದ್ರ ಹೊಸವೊಕ್ಲು, ಉಪಾಧ್ಯಕ್ಷರಾಗಿ ಗೀತಾ, ಕಾರ್ಯದರ್ಶಿಯಾಗಿ ವಸಂತಿ ಜೆ., ಜೊತೆ ಕಾರ್ಯದರ್ಶಿಯಾಗಿ ಯಶ್ವಿನಿ ಹಾಗೂ ಕೋಶಾಧಿಕಾರಿಯಾಗಿ ಪುರಂದರ ಆಯ್ಕೆಯಾದರು.
ಭಜನಾ ಪರಿಷತ್ತಿನ ಗೌರವ ಸಲಹೆಗಾರ ಸತ್ಯನಾರಾಯಣ ಹೆಗ್ಡೆ, ಭಜನಾ ಪರಿಷತ್ತಿನ ಸಮನ್ವಯಾಧಿಕಾರಿ ಸಂತೋಷ್ ಕುಮಾರ್, ಕಡಬ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ಸುಂದರ ಗೌಡ ಒಗ್ಗು ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಲಯದ ಎಲ್ಲಾ ಭಜನಾ ಮಂಡಳಿಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಹಾಗೂ ಭಜನಾ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು. ನೆಲ್ಯಾಡಿ ವಲಯದ ಮೇಲ್ವಿಚಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಸುಮನಾ ಎಸ್. ಸ್ವಾಗತಿಸಿದರು. ವೇದಾ ಪಿ. ವಂದಿಸಿದರು.


