









ನೆಲ್ಯಾಡಿ: ಭಾರೀ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿಯಾದ ಘಟನೆ ಜು.31ರಂದು ಮಧ್ಯಾಹ್ನ ನೆಲ್ಯಾಡಿ ಗ್ರಾಮದ ರಾಮನಗರದಲ್ಲಿ ನಡೆದಿದೆ.
ರಾಮನಗರ ನಿವಾಸಿ ಮಂಚ ಮುಗೇರ ಎಂಬವರ ಮನೆಗೆ ಮರ ಬಿದ್ದ ಪರಿಣಾಮ ಸುಮಾರು ಸಿಮೆಂಟ್ ಶೀಟ್, ಹಂಚು,ಪಕ್ಕಾಸು ಹಾನಿಗೊಂಡಿದೆ ಎಂದು ವರದಿಯಾಗಿದೆ. ನೆಲ್ಯಾಡಿ ಗ್ರಾಮ ಆಡಳಿತಾಧಿಕಾರಿ ಲಾವಣ್ಯ, ನೆಲ್ಯಾಡಿ ಗ್ರಾ.ಪಂ.ಮಾಜಿ ಸದಸ್ಯ ರವಿಪ್ರಸಾದ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



