ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ : ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ!

ಶೇರ್ ಮಾಡಿ

ನೇಸರ ಜು.05: ಸರಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕಡಬ ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ಒಂದೆಡೆ ಮಳೆ, ಇನ್ನೊಂದೆಡೆ ಕಛೇರಿಯ ಎದುರು ಪುರುಷರು, ಮಹಿಳೆಯರು ಅರ್ಜಿ ಹಿಡಿದುಕೊಂಡು ನಿಂತು ಬಿಟ್ಟಿದ್ದಾರೆ. ಜಿಲ್ಲಾಧಿಕಾರಿ ತಹಸೀಲ್ದಾರ್ ಅವರ ಕಛೇರಿಯ ಒಳಗಡೆ ಜನರ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಿದ್ದಾರೆ.
ಇಂತಹ ಉತ್ತಮ ಕಾರ್ಯಕ್ರಮ ಆದರೂ ಇದನ್ನು ಒಂದು ಸಭಾಭವನ ಅಥವಾ ವಿಶಾಲ ಕೊಠಡಿಯಲ್ಲಿ ಮಾಡಿದ್ದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತಿತ್ತು. ಇನ್ನಾದರೂ ತಾಲೂಕು ಆಡಳಿತ ಎಚ್ಚೆತ್ತೊಳ್ಳಲಿ ಎಂದು ಸಾರ್ವಜನಿಕರ ಅಭಿಪ್ರಾಯ.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!