ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ರಾಜ್ಯಸಭಾ ಸದಸ್ಯರಾಗಿ ನಾಮಾಂಕಿತಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಭೇಟಿ

ಶೇರ್ ಮಾಡಿ

ನೇಸರ ಜು.18: ಧನ್ವಂತರಿ ಕ್ಷೇತ್ರವೆಂದೆ ಪ್ರಸಿದ್ಧಿ ಯಾಗಿರುವ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ರಾಜ್ಯಸಭಾ ಸದಸ್ಯರಾಗಿ ನಾಮಾಂಕಿತಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿದರು. ದೇವಳದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಜೀರ್ಣೋದ್ಧಾರ ಸಮಿತಿಯ ಮಾರ್ಗದರ್ಶಕರಾದ ಧರ್ಮಾಧಿಕಾರಿಗಳು ಪುಷ್ಕರಣಿ, ಹಾಗೂ ಜೀರ್ಣೋದ್ಧಾರ ಸಂಬಂಧಿತ ಕಾರ್ಯಗಳನ್ನು ವೀಕ್ಷಿಸಿ ಆಡಳಿತ ಕಮಿಟಿಯವರಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಪ್ರಧಾನ ಅರ್ಚಕ ರಮಾನಂದ ಭಟ್, ಬಿಜೆಪಿ ಹಿರಿಯ ನಾಯಕ ಕುಶಾಲಪ್ಪ ಗೌಡ ಪೂವಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹಾಗೂ ಪವಿತ್ರ ಪಾಣಿ ರಾಧಾಕೃಷ್ಣ ಎಡಪಡಿತ್ತಾಯ, ಉಪಾಧ್ಯಕ್ಷ ಕುಶಾಲಪ್ಪ ಗೌಡ ಪುಡ್ಕೆತ್ತೂರು, ಶ್ರೀ.ಕ್ಷೇ.ಧ. ಗ್ರಾ. ಯೋ. ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಹಿರಿಯ ವೈದ್ಯ ಡಾ. ಮೋಹನ್ ದಾಸ್ ಗೌಡ ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.


ಈ ಸಂದರ್ಭ ಧರ್ಮಾಧಿಕಾರಿಯವರನ್ನು ಊರವರು ಗೌರವ ಪೂರ್ವಕವಾಗಿ ಸನ್ಮಾನಿಸಿದರು.

Leave a Reply

error: Content is protected !!