ಶಿಶಿಲ – ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರಿಗೆ ಅಣಬೆ ತರಬೇತಿ

ಶೇರ್ ಮಾಡಿ

ನೇಸರ ನ19: ಕೃಷಿ ಇಲಾಖೆ ಬೆಳ್ತಂಗಡಿಯ ಕೊಕ್ಕಡ ರೈತ ಸಂಪರ್ಕ ಕೇಂದ್ರದ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ದಿನಾಂಕ 19/11/2021 ರಂದು ಶಿಶಿಲ ವ್ಯಾಪ್ತಿಯ ಸಂಜೀವಿನಿ ಸ್ವಸಹಾಯ ಸಂಘದ ಒಕ್ಕೂಟದ ಸಹಕಾರದೊಂದಿಗೆ, ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರಿಗೆ ಅಣಬೆ ತರಬೇತಿ ನಡೆಯಿತು.
ತರಬೇತುದಾರರಾಗಿ ಸುಲೈಮಾನ್ ಬೆಳಾಲು ರವರು ಅಣಬೆ ಮತ್ತು ಮಲ್ಲಿಗೆ ಕೃಷಿಯ ಬಗ್ಗೆ ತರಬೇತಿ ನೀಡಿದರು.
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಹಾಗೂ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಗಿರಿಜಾ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!