ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ NSS ಘಟಕದ ವಾರಾಂತ್ಯ ಶಿಬಿರ

ಶೇರ್ ಮಾಡಿ

ನೇಸರ ಆ.01: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕವು ವಾರಾಂತ್ಯ ಶಿಬಿರವನ್ನು ಕೈಕಂಬ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ನಡೆಸಿತು.

ಶಾಲೆಯ ಆವರಣದ ದುರಸ್ತಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಂಡರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ದಿನೇಶ್ ಪಿ.ಟಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಶ್ರೀಮತಿ ಆರತಿ ಕೆ, ಶ್ರೀಮತಿ ನಮಿತಾ ಮಾರ್ಗದರ್ಶನವನ್ನು ನೀಡಿದರು. ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀಮತಿ ಶೋಭ ಗಿರಿಧರ್ ಜೊತೆಗಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪುಷ್ಪಾವತಿ ,ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ಸಾಜಸ್, ಅಧ್ಯಾಪಕ ವರ್ಗದವರು, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು ಹಳೆ ವಿದ್ಯಾರ್ಥಿಗಳು ಸಹಕರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದಿಂದ ಬೋಜನ ವ್ಯವಸ್ಥೆಯನ್ನು ಮಾಡಲಾಯಿತು.

Leave a Reply

error: Content is protected !!