ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಶಸ್ತಿ

ಶೇರ್ ಮಾಡಿ

ನೇಸರ ಆ.18: ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ ಪುತ್ತೂರು ತಾಲೂಕಿನ ಹಿರೇಬಂಡಾಡಿ ಶಾಲೆಯಲ್ಲಿ ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್ ಸೊಸೈಟಿ ಆಡಳಿತ ಮಂಡಳಿಯ ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಹಿರಿಯ ಪ್ರಾಥಮಿಕ ಶಾಲೆಯ ಹುಡುಗರ ವಾಲಿಬಾಲ್ ಪಂದ್ಯಾಟ ವಿಭಾಗದಲ್ಲಿ ದ್ವಿತೀಯ ಸ್ಥಾನ ಪ್ರಶಸ್ತಿ ಪಡೆದುಕೊಂಡಿತು ಹಾಗೂ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳಾದ ಹರ್ಷ ಪಿ.ಬಿ., ಪ್ರೀತಂ., ಸಿಂಚನ್ ., ಸುಧೀಕ್ಷ್ .ಬಿ., ಚರಣ್ ಎಸ್., ವೈಶಾಖ್.ಜಿ., ಕೌಶಿಕ್ ಎನ್., ಆಕಾಶ್.ಪಿ., ರತನ್ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷಣ್ ಗೌಡ ಮಾರ್ಗದರ್ಶನ ನೀಡಿರುತ್ತಾರೆ. ಶಾಲಾ ದೈಹಿಕ ಶಿಕ್ಷಕ ಚರಣ್ ತರಬೇತಿ ನೀಡಿರುತ್ತಾರೆ.

NESARA|| WhatsApp ||GROUPS

   
                          

 

  
                                                     

 

Leave a Reply

error: Content is protected !!