ಬಜತ್ತೂರು: ನವೀಕರಣಗೊಂಡ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯಲ್ಲಿ ಪಾಠ ಪ್ರವಚನಗಳಿಗೆ ಚಾಲನೆ

ಶೇರ್ ಮಾಡಿ

ನೇಸರ ಸೆ.02: ಬಜತ್ತೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಡಳಿತ ಮಂಡಳಿಕ್ಕೊಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ 37 ವರ್ಷಗಳ ಅನಂತರ ನವೀಕರಣಗೊಂಡು ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ಚಾಲನೆ ನೀಡಲಾಯಿತು.
ಧರ್ಮಸ್ಥಳ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದೊಂದಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿರುವ ಡಿ.ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಸುಮಾರು ಇಪ್ಪತ್ತೈದು ಲಕ್ಷ ರೂಪಾಯಿಗಳಿಂದ ಶಾಲೆಯ ತರಗತಿ ಕೋಣೆಗಳು, ಮುಖ್ಯೋಪಾಧ್ಯಾಯರ ಕೊಠಡಿ, ಅಧ್ಯಾಪಕರ ಕೊಠಡಿ ಗಳಿಗೆ ಟೈಲ್ಸ್ ಗಳ ನೆಲಹಾಸು ಸುಣ್ಣ ಬಣ್ಣ , ವಿದ್ಯುತ್ ವೈರಿಂಗ್ ಅಳವಡಿಸುವಿಕೆ,ಶಾಲಾ ಸಭಾಂಗಣ, ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶೌಚಾಲಯ, ನೀರಿನ ಸೌಲಭ್ಯ, ಕಂಪ್ಯೂಟರ್ ಕೊಠಡಿ, ಅಕ್ಷರ ದಾಸೋಹ ಕೊಠಡಿಗಳು ನವೀಕರಣಗೊಂಡಿತು.

ನವೀಕರಣಗೊಂಡ ಈ ಸುಸಂದರ್ಭದಲ್ಲಿ ಶಾಲೆಯ ಶ್ರೇಯೋಭಿವೃದ್ಧಿಗಾಗಿ ಗಣಹೋಮ ನೆರವೇರಿಸಿ, ದೀಪ ಬೆಳಗಿಸುವುದರ ಮೂಲಕ ವಿದ್ಯಾರ್ಥಿಗಳನ್ನು ತರಗತಿಗೆ ಸಾಂಕೇತಿಕವಾಗಿ ಬರಮಾಡಿಕೊಳ್ಳಲಾಯಿತು .
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ವಿದ್ಯಾರ್ಥಿಗಳ ಕ್ಷೇಮಪಾಲನಾಧಿಕಾರಿ ಸೋಮಶೇಖರ್ ಶೆಟ್ಟಿ ದೀಪ ಬೆಳಗಿಸಿ, ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಬೇಕಾದ ಎಲ್ಲಾ ಮೂಲಭೂತ ಸವಲತ್ತುಗಳನ್ನು ಧರ್ಮಸ್ಥಳದ ಮಂಜುನಾಥೇಶ್ವರ ಆಡಳಿತ ಸಂಸ್ಥೆ ಮಾಡಿಕೊಟ್ಟಿದೆ ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಮುಖ್ಯೋಪಾಧ್ಯಾಯರಾದ ಸೂರ್ಯ ಪ್ರಕಾಶ ಮಾತನಾಡಿ ಧರ್ಮಸ್ಥಳ ಖಾವಂದರು ಮತ್ತು ಧರ್ಮಸ್ಥಳ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಯಾಗಿರುವ ಡಿ.ಹರ್ಷೇಂದ್ರ ಕುಮಾರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಇಂಜಿನಿಯರಾಗಿರುವ ಯಶೋಧರ ಹಾಗೂ ಕಾಂಟ್ರ್ಯಾಕ್ಟ್ ಅಬ್ದುಲ್ ಇವರನ್ನು ಗೌರವಿಸಲಾಯಿತು.ನಿವೃತ್ತ ಮುಖ್ಯಗುರುಗಳಾದ ಸುಬ್ರಹ್ಮಣ್ಯ ಭಟ್, ನಿವೃತ್ತ ಶಿಕ್ಷಕ ಕೃಷ್ಣಪ್ಪ ಗೌಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿರುವ ವೇಣು ಗೋಪಾಲ್ ನಾಯಕ್, ಗೋಪಾಲಕೃಷ್ಣ ನಾಯಕ್, ಶಿವರಾಮ ಕಾರಂತ, ದುಗ್ಗಪ್ಪಗೌಡ, ಸಿದ್ದಪ್ಪಗೌಡ, ಯುವಕ ಮಂಡಲದ ಅಧ್ಯಕ್ಷರಾಗಿರುವ ಅನಿಲ್ ಪಿಂಟೊ, ಉಪಾಧ್ಯಕ್ಷರಾದ ಸಚಿನ್ ಇವರುಗಳು ಉಪಸ್ಥಿತರಿದ್ದರು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!