ಆಧುನಿಕ ವಿಧಾನಗಳ ಮೂಲಕ ಉತ್ತಮ ಗುಣಮಟ್ಟದ ಹಾಲು ಪೂರೈಸಿ – ಡಾ ಚಂದ್ರಶೇಖರ್ ಭಟ್

ಶೇರ್ ಮಾಡಿ

ನೇಸರ ಸೆ.17: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ.16 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮುದಾಯ ಭವನ ಹಳ್ಳಿಂಗೇರಿಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ವೇತಾ.ಹೆಚ್.ಕೆ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದಲ್ಲಿ ಒಟ್ಟು 167 ಸದಸ್ಯರಿದ್ದು ವರದಿ ಸಾಲಿನಲ್ಲಿ 2,11,833 ಲೀಟರ್ ಹಾಲು ಸಂಗ್ರಹಿಸಿದ್ದು. ಸಂಘವು ಈ ವರ್ಷ ಗರಿಷ್ಠ 2,95,450 ರೂಗಳ ನಿವ್ವಳ ಲಾಭಗಳಿಸಿದೆ. ಇದನ್ನು ಸಂಘದ ನಿಬಂಧನೆ ಪ್ರಕಾರ ಪ್ರತಿ ಲೀಟರ್ ಹಾಲಿಗೆ 66 ಪೈಸೆಯಂತೆ ಬೋನಸ್ ನೀಡಲಾಗುವುದು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ ಚಂದ್ರಶೇಖರ್ ಭಟ್ ಮಾತನಾಡಿ ಒಕ್ಕೂಟದಿಂದ ಲಭ್ಯವಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಆಧುನಿಕ ವಿಧಾನಗಳ ಮೂಲಕ ಉತ್ತಮ ಗುಣಮಟ್ಟದ ಹಾಲು ಪೂರೈಸಿ ಆರ್ಥಿಕ ಪ್ರಗತಿ ಎಂದರು. ಸಂಘದಿಂದಲೇ ಪಶು ಆಹಾರವನ್ನು ಪಡೆಯುವುದರಿಂದ ಸದಸ್ಯರಿಗೂ ಹೆಚ್ಚಿನ ಲಾಭವಾಗುತ್ತದೆ ಎಂದರು. ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಅವರು ಒಕ್ಕೂಟದಿಂದ ಲಭ್ಯವಾಗುವ ಸವಲತ್ತಿನ ಬಗ್ಗೆ ತಿಳಿಸಿದರು
ಸಂಘದ ಉಪಾಧ್ಯಕ್ಷೆ ಹೇಮಾವತಿ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು. ಸಂಘದ ವರದಿ ಸಾಲಿನಲ್ಲಿ ಅತ್ಯಂತ ಹೆಚ್ಚು ಮತ್ತು ವರ್ಷಪೂರ್ತಿ ಹಾಲು ಪೂರೈಸಿದ ಸದಸ್ಯರುಗಳನ್ನು ಬಹುಮಾನ ನೀಡಿ ಗೌರವಿಸಲಾಯಿತು. ಶ್ರೀಮತಿ ದಿವ್ಯಾ.ಕೆ ಪ್ರಾರ್ಥಿಸಿದರು. ಶ್ರೀಮತಿ ಸುಂದರಿ ಎ ಸ್ವಾಗತಿಸಿದರು. ಶ್ರೀಮತಿ ಅಕ್ಷತಾ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ವರದಿ ವಾಚಿಸಿದರು. ಶ್ರೀಮತಿ ವೇದಾವತಿ ಸಹಕರಿಸಿದರು.

Leave a Reply

error: Content is protected !!