ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಶೇರ್ ಮಾಡಿ

ಪುತ್ತೂರು: ಮಡಿಕೇರಿಯಲ್ಲಿ ನಡೆದ ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಧ್ವಿತ್ ಶರ್ಮ(ಸುಧೀರ್.ಬಿ.ಎಸ್ ಮತ್ತು ಲತಾ ದಂಪತಿ ಪುತ್ರ) ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 5ನೇ ತರಗತಿಯ ಮಹತಿ.ಎಂ(ಶಿವರಂಜನ್.ಎಂ ಮತ್ತು ಲಾವಣ್ಯ ಭಟ್ ದಂಪತಿ ಪುತ್ರಿ) ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ ಹಾಗೂ ಇವರು Institute of Karate and Martial Arts Puttur ಶಾಖೆಯ ಶಿಕ್ಷಕರಾದ ಶಿವಪ್ರಸಾದ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

error: Content is protected !!