ಮಂಗಳೂರಲ್ಲಿ ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಹಿಳಾ ಪಿಎಸ್​ಐ! ಸ್ಥಿತಿ ಗಂಭೀರ

ಶೇರ್ ಮಾಡಿ

ಮಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್​ಐ ಒಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಜ್ಯೋತಿ ಬಾಯಿ (36) ಆತ್ಮಹತ್ಯೆಗೆ ಯತ್ನಿಸಿದವರು. ಪಣಂಬೂರು ನವಮಂಗಳೂರು ಬಂದರು ಪ್ರಾಧಿಕಾರದ ಮೊದಲ ಗೇಟ್​ನಲ್ಲಿ ಕರ್ತವ್ಯನಿರತ ಸಿಐಎಸ್​ಎಪ್​ನ ಪಿಎಸ್​ಐ ಜ್ಯೋತಿ, ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡಿದ್ದಾರೆ.
ಗುಂಡೇಟಿನಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಜ್ಯೋತಿಬಾಯಿ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಪಣಂಬೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜ್ಯೋತಿ ಅವರ ಪತಿ ಓಂಬೀರ್ ಸಿಂಗ್ ಅವರು ಎಂಆರ್​ಪಿಎಲ್​ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದಾರೆ. ಇವರು ರಾಜಸ್ಥಾನ ಮೂಲದವರು.

See also  ಬಜತ್ತೂರು ಅಯೋಧ್ಯಾನಗರದ ಶಾಲೆಯಲ್ಲಿ ಮಿಯಾವಾಕಿ ಮಾದರಿಯಲ್ಲಿ ಗಿಡ ನೆಡಲಾಯಿತು

Leave a Reply

Your email address will not be published. Required fields are marked *

error: Content is protected !!