ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಕೊಣಾಲು ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ

ಶೇರ್ ಮಾಡಿ

ನೇಸರ ಡಿ11: ಕಡಬ ತಾಲೂಕು ಕೊಣಾಲು ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ ದಿನಾಂಕ 11 -12-2021 ರಂದು ಮುಡ್ನೂರು ಸರಕಾರಿ ಪ್ರೌಢ ಶಾಲೆಗೆ ಮುಂಬಡ್ತಿ ಹೊಂದಿ ವರ್ಗಾವಣೆಗೊಂಡು ತೆರಳುತ್ತಿರುವ ಶ್ರೀಮತಿ ಯಶೋಧ.ವೈ, ಸ.ಉ.ಹಿ.ಪ್ರಾ.ಶಾಲೆ ನ್ಯೂ ಪಡ್ಪು ಮಂಗಳೂರಿಗೆ ವರ್ಗಾವಣೆಯಾಗಿ ತೆರಳುತ್ತಿರುವ ಬಿನ್ನಿ ಲೆನ್ನಿ.ಬಿ.ಲೂಯಿಸ್,ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶೀನಪ್ಪ ನಾಯ್ಕ.ಎಸ್ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಮೋಹಿದ್ದಿನ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನೂತನ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ರಫೀಕ್.ಕೆ.ಇ, ಶಾಲಾ ಮುಖ್ಯೋಪಾಧ್ಯಾಯರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಊರವರು.ಪೋಷಕರು. ಶಿಕ್ಷಕ ವೃಂದ,ಕೊಣಾಲು ಪ್ರೌಢಶಾಲೆಯ ಹಾಗೂ ಪದವಿಪೂರ್ವ ಕಾಲೇಜಿನ ಶಿಕ್ಷಕರು,ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!