ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ನೆಲ್ಯಾಡಿ

ಶೇರ್ ಮಾಡಿ

ನೇಸರ ಡಿ 12: ನೆಲ್ಯಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವ ಸ್ಪಂದನ ಟ್ರಸ್ಟ್ (ರಿ )ನ ಆಶ್ರಯದಲ್ಲಿ ಶ್ರೀನಿವಾಸ ಆಸ್ಪತ್ರೆ ಮುಕ್ಕ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ದಿನಾಂಕ 12-12-2021 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಸ್ಪಂದನ ಟ್ರಸ್ಟಿನ ಗೌರವಾಧ್ಯಕ್ಷರಾದ ಬಾಲಕೃಷ್ಣ ಬಾಣಜಾಲುರವರು ವಹಿಸಿದರು. ಅತಿಥಿಗಳಾದ ಖ್ಯಾತ ಹೃದ್ರೋಗ ತಜ್ಞರಾದ ಡಾ.ಅಮಿತ್ ಕಿರಣ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಡಾ.ನಿಖಿಲ್, ಯುವ ಸ್ಪಂದನ ಟ್ರಸ್ಟ್ ನ ಅಧ್ಯಕ್ಷ ಪ್ರದೀಪ್ ಡಿಸೋಜ, ಕಾರ್ಯದರ್ಶಿ ಯಶೋಧರ.ಎಂ ಮತ್ತು ಉಪಾಧ್ಯಕ್ಷ ಶರತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ನಮ್ಮನ್ನು ಅಗಲಿದ ವೀರ ಯೋಧ ಬಿಪಿನ್ ರಾವತ್ ಹಾಗೂ ಸಿಬ್ಬಂದಿಗಳಿಗೆ ಮೌನ ಪ್ರಾರ್ಥನೆ ನಡೆಸಿ ಸಂತಾಪ ಸೂಚಿಸಲಾಯಿತು.

ಸುಮಾರು 200 ಜನ ಸಾರ್ವಜನಿಕರ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.
ಯುವ ಸ್ಪಂದನ ಟ್ರಸ್ಟ್ ನ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಶ್ರೀನಿವಾಸ ಆಸ್ಪತ್ರೆ ಮುಕ್ಕ ಇವರ ಸಹಕಾರದಿಂದ ಯಶಸ್ವಿಯಾಗಿ ನಡೆಯಿತು. ಸ್ವಾಗತ ಹಾಗೂ ವಂದನಾರ್ಪಣೆಯನ್ನು ಸುರೇಶ್ ಪಡಿಪಂಡ ನಡೆಸಿಕೊಟ್ಟರು.

Leave a Reply

error: Content is protected !!