ಶಿಶಿಲ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಶೇರ್ ಮಾಡಿ

ನೇಸರ ಡಿ.13: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಪೇರಿಕೆಯ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಲಕ್ಷ್ಮೀಶ(16.ವ) ಎಂಬವರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.12 ರಂದು ನಡೆದಿದೆ.
ಶಿಶಿಲ ಗ್ರಾಮದ ಪೇರಿಕೆ ನಿವಾಸಿ, ಲಿಂಗಪ್ಪ ಗೌಡ ರವರ ಪುತ್ರ ಲಕ್ಷ್ಮೀಶ ರವರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಡಿ.12 ರಂದು ಭಾನುವಾರ ರಜಾದಿನವಾದ ಕಾರಣ ವಿದ್ಯಾರ್ಥಿ ಮನೆಯಲ್ಲಿಯೇ ಇದ್ದರು. ಕೆಲಸಕ್ಕೆಂದು ಹೋಗಿದ್ದ ಈತನ ತಾಯಿ ಮಧ್ಯಾಹ್ನ ಮನೆಗೆ ಬಂದು ಬಳಿಕ ಮತ್ತೆ ಕೆಲಸದ ಸ್ಥಳಕ್ಕೆ ತೆರಳಿದ್ದರು. ಸಂಜೆ ಮನೆಗೆ ಬಂದು ನೋಡಿದ ವೇಳೆ ಬಾಲಕ ಮನೆಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕೃತ್ಯ ಬೆಳಕಿಗೆ ಬಂದಿದೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!