ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿ ಸಹಾಯಧನದ ಚೆಕ್ ಹಸ್ತಾಂತರ

ಶೇರ್ ಮಾಡಿ

ನೆಲ್ಯಾಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ ಯೋಜನೆಯಡಿಯಲ್ಲಿ ದಿನಾಂಕ 15.11.2022 ರಂದು ಕ್ಯಾಂಪ್ಕೊ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಹಾಲನ್ತಡ್ಕ ಮನೆಯ ಹೇಮಾನಂದ ರವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಕ್ಯಾಂಪ್ಕೊ ಸಂಸ್ಥೆಯ ವತಿಯಿಂದ ನೀಡಲಾಗುವ ₹.50,000/- ಸಹಾಯಧನದ ಚೆಕ್ಕನ್ನು ಪ್ರಾದೇಶಿಕ ಮಾರುಕಟ್ಟೆ ವ್ಯವಸ್ಥಾಪಕರಾದ ಜಯರಾಮ ಶೆಟ್ಟಿಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಾಣಾಧಿಕಾರಿ ದಯಾಕರ ರೈ, ಮ್ಯಾನೇಜರ್ ರಮೇಶ್, ಮಹೇಶ್, ಕ್ಯಾಂಪ್ಕೊ ನೆಲ್ಯಾಡಿ ಶಾಖಾಧಿಕಾರಿ ದಿನೇಶ್ ಮತ್ತು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Leave a Reply

error: Content is protected !!