ಕಡಬ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ

ಶೇರ್ ಮಾಡಿ

ಕಡಬ: ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆಯು ಸಚಿವರಾದ ಎಸ್. ಅಂಗಾರ ರವರ ಅಧ್ಯಕ್ಷತೆಯಲ್ಲಿ ಇಂದು ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕಡಬ ತಹಶೀಲ್ದಾರ್ ರಮೇಶ್ ಬಾಬು, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ, ತ್ರೈಮಾಸಿಕ ಕೆ.ಡಿ.ಪಿ. ನಾಮ ನಿರ್ದೇಶಿತ ಸದಸ್ಯರಾದ ಭಾಸ್ಕರ ಎಸ್ ಗೌಡ ಇಚ್ಲಂಪಾಡಿ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ವಿಭಾಗ ವತಿಯಿಂದ 2022-23ನೇ ಸಾಲಿನಲ್ಲಿ ಕುಶಲಕರ್ಮಿಗಳಿಗೆ ನೀಡಲಾಗುವ ಉಚಿತ ಸುಧಾರಿತ ಉಪಕರಣಗಳನ್ನು ಸಚಿವರಾದ ಎಸ್. ಅಂಗಾರರವರು ಕಡಬ ಅಂಬೇಡ್ಕರ್ ಭವನದಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಿದರು.

Leave a Reply

error: Content is protected !!