ವಿಶ್ವ ಆರೋಗ್ಯಕರವಾಗಿರ ಬೇಕಾದರೆ ಸ್ತ್ರೀಯರಿಗೆ ವಿಶೇಷ ಗೌರವ ಕೊಡಬೇಕು- ಡಾ.ಕುಮಾರ್

ಶೇರ್ ಮಾಡಿ

ಮಂಗಳೂರು: ಕುಟುಂಬ ಹಾಗೂ ಸಮಾಜವನ್ನು ಬೆಳಗುವ ಶಕ್ತಿ ಮಹಿಳೆಗೆ ಮಾತ್ರವಿದೆ. ವಿಶ್ವವೇ ಆರೋಗ್ಯಕರವಾಗಿರಬೇಕು ಮತ್ತು ಎಲ್ಲರೂ ಸಂತೋಷ, ನೆಮ್ಮದಿಯಿಂದಿರಲು ಮಹಿಳೆಯಿಂದ ಮಾತ್ರ ಸಾಧ್ಯವಿದೆ. ಹಾಗಾಗಿ ಸ್ತ್ರೀಯರಿಗೆ ವಿಶೇಷ ಗೌರವ ಕೊಡಬೇಕು ಎಂದು ದ.ಕ.ಜಿಪಂ ಸಿಇಒ ಡಾ.ಕುಮಾರ್ ಅಭಿಪ್ರಾಯಪಟ್ಟರು.

ದ.ಕ.ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆಯ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಗರದ ಕರಾವಳಿ ಮೈದಾನದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ, ಗೌರವವಿದೆ. ಮಹಿಳೆರ ಬಗ್ಗೆ ಅಪಾರ ಕಾಳಜಿಯಿಟ್ಟು ಶಿಕ್ಷಣ, ರಾಜಕೀಯ, ಕೀಡೆ ಸಹಿತ ಎಲ್ಲಾ ಕ್ಷೇತ್ರದಲ್ಲೂ ಅವರು ಸ್ವಾವಲಂಬಿಯಾಗಿ ಬದುಕಬೇಕೆನ್ನುವ ಕಾರಣಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ವೇದಿಕೆಯಲ್ಲಿ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ವೈಟ್ ಲಿಫ್ಟಿಂಗ್ ತರಬೇತುದಾರ ಸರಸ್ವತಿ ಪುತ್ರನ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷೆ ಲಿಲ್ಲಿ ಪಾಯಸ್, ಸುಳ್ಯ ತಾಲೂಕು ಯುವಜನ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ದೇವರಾಜ್ ಮುತ್ಲಾಜೆ ಉಪಸ್ಥಿತರಿದ್ದರು.

Leave a Reply

error: Content is protected !!