ಅಕ್ರಮ ಮರಳುಗಾರಿಕೆ ಆರೋಪ; 6 ಲಾರಿ ವಶ

ಶೇರ್ ಮಾಡಿ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 5 ಕಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಅಡ್ಡೆಗಳಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಮರಳು ಸಮೇತ 6 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಂಜಾರು, ಪಡುಪೆರಾರು ದ್ವಾರ, ಪೊಳಲಿ ದ್ವಾರ, ಅಡ್ಡೂರು ಸಮೀಪದ ನೂಯಿ ತಲಾ ಒಂದೊಂದು ಹಾಗೂ ಬಡಗ ಎಡಪದವಿನಲ್ಲಿ 2 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬಳಿಕ ಮರಳು ಸಮೇತ ಲಾರಿಗಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸಿದ್ದಾರೆ.

See also  ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ

Leave a Reply

Your email address will not be published. Required fields are marked *

error: Content is protected !!