1,01,549 ಮಕ್ಕಳಿಗೆ ಲಸಿಕೆ ನೀಡಲು ಸಿದ್ಧರಾಗಿ: ದ.ಕ. ಜಿಲ್ಲಾಧಿಕಾರಿ

ಶೇರ್ ಮಾಡಿ

ನೇಸರ ಡಿ.30:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು ಅವರಿಗೆ ಜ. 3ರಿಂದ ಕೋವಿಡ್‌ ಲಸಿಕೆ ನೀಡಲು ಪಟ್ಟಿ ಸಿದ್ಧಪಡಿಸಿ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಮ್ಮ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಕೋವ್ಯಾಕ್ಸಿನ್‌ ಮಾತ್ರ ನೀಡಲಾಗುವುದು. ಆಯಾ ಶಾಲೆ-ಕಾಲೇಜುಗಳಲ್ಲಿ ಸ್ಥಳೀಯ ಪ್ರಾ.ಆ.ಕೇಂದ್ರದ ಲಸಿಕಾ ತಂಡದ ಮೂಲಕ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಮಕ್ಕಳ ಕೋವಿಡ್‌ ಲಸಿಕಾ ಕುರಿತು ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕ ಸಮಿತಿಯ ಸಭೆ ಕರೆದು ಮಾಹಿತಿ ನೀಡುವಂತೆಯೂ ಸೂಚಿಸಿದರು.
ಜಿ.ಪಂ. ಸಿಇಒ ಡಾ| ಕುಮಾರ್‌, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ರಾಜೇಶ್‌, ಡಿಡಿಪಿಐ ಡಾ| ಮಲ್ಲೇಸ್ವಾಮಿ, ಕೋವಿಡ್‌ ನೋಡಲ್‌ ಅಧಿಕಾರಿ ಡಾ| ಅಶೋಕ್‌, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ| ಸುಜಯ್‌, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿದ್ದರು.

Leave a Reply

error: Content is protected !!