ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ: ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರಗಳ ಅಭ್ಯರ್ಥಿ ಯಾರು ???

ಶೇರ್ ಮಾಡಿ

ಬೆಂಗಳೂರು : ಬಹುನಿರೀಕ್ಷಿತ ಬಿಜೆಪಿಯ 10 ಅಭ್ಯರ್ಥಿಗಳ ಮೂರನೇ ಪಟ್ಟಿ ಸೋಮವಾರ ಸಂಜೆ ಬಿಡುಗಡೆಯಾಗಿದ್ದು, 224 ಕ್ಷೇತ್ರಗಳ ಪೈಕಿ ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ.

ಜಗದೀಶ್ ಶೆಟ್ಟರ್ ಅವರು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮಹೇಶ್ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಅಲ್ಲಿ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ.

ಅರವಿಂದ್ ಲಿಂಬಾವಳಿ ಅವರು ಪ್ರತಿನಿಧಿಸುತ್ತಿದ್ದ ಮಹದೇವಪುರ ಎಸ್ ಸಿ ಮೀಸಲು ಕ್ಷೇತ್ರದಲ್ಲಿ ಅವರ ಪತ್ನಿ ಮಂಜುಳಾ ಅವರಿಗೆ ನೀಡಲಾಗಿದೆ.

ವಿ.ಸೋಮಣ್ಣ ಅವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜ ನಗರ ಕ್ಷೇತ್ರಕ್ಕೆ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ನಾಗಠಾಣ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಸಂಜೀವ ಐಹೊಳೆ, ಸೇಡಂಗೆ ರಾಜ್ ಕುಮಾರ್ ಪಾಟೀಲ್, ಕೊಪ್ಪಳ ಕ್ಷೇತ್ರಕ್ಕೆ ಮಂಜುಳಾ ಅಮರೇಶ್, ರೋಣಕ್ಕೆ ಕಳಕಪ್ಪ ಬಂಡಿ, ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಬಿ.ರಾಮಣ್ಣ, ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಜಗದೀಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

Leave a Reply

error: Content is protected !!