ಸುಳ್ಯ: ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತೀರ್ಮಾನ ಮಾಡಿದ್ದ ಕೆಪಿಸಿಸಿ ಸದಸ್ಯ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಹೆಚ್.ಎಂ.ನಂದಕುಮಾರ್ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ನಂದಕುಮಾರ್ ಅಭಿಮಾನಿ ಬಳಗದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಂದಕುಮಾರ್ ಬಣ ತಟಸ್ಥರಾಗಿರಲು ಇರಲು ನಿರ್ಧರಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡದಂತೆ ನಂದಕುಮಾರ್ ಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಮಾತಿಗೆ ಬೆಲೆ ಕೊಟ್ಟು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ನಂದಕುಮಾರ್ ಸ್ಪಷ್ಟಪಡಿಸಿದ್ದಾರೆ.