ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಶೇರ್ ಮಾಡಿ

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಗರದ ಜೆಎಸ್ ಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಜಯಲಕ್ಷ್ಮಿ(18) ಮೃತಳು.
ಪಿಸಿಎಂಸಿ ವಿಷಯ ತೆಗೆದುಕೊಂಡಿದ್ದ ಈ ವಿದ್ಯಾರ್ಥಿನಿ ಫಲಿತಾಂಶದಲ್ಲಿ ಫೇಲಾದ ವಿಷಯ ತಿಳಿದು, ನಗರದ ಜೆಎಸ್ ಎಸ್ ಹಾಸ್ಟೆಲ್ ನ ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಗುಂಡ್ಲುಪೇಟೆ ತಾಲೂಕಿನ ಮೂಡುಗೂರು ಗ್ರಾಮದ ಮಹೇಶ್ ಎಂಬುವರ ಪುತ್ರಿ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!