ಚಾರ್ಮಾಡಿ ಘಾಟಿ ಒಂಟಿ ಸಲಗ ಸಂಚಾರ ವಾಹನ ಸವಾರರಲ್ಲಿ ಭೀತಿ

ಶೇರ್ ಮಾಡಿ

ಚಾರ್ಮಾಡಿ ಘಾಟಿ ಪ್ರದೇಶದ ಅಲ್ಲಲ್ಲಿ ಒಂಟಿ ಸಲಗ ಸಂಚರಿಸುತ್ತಿರುವ ಕುರಿತು ವಾಹನ ಸವಾರರು ತಿಳಿಸಿದ್ದಾರೆ.
ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನ ಬಳಿ ಬುಧವಾರ ಸಂಜೆ 7ರ ವೇಳೆಗೆ ಹೆದ್ದಾರಿ ಬದಿ ಕಾಡಾನೆ ಇದ್ದ ಕುರಿತು ತರಕಾರಿ ಸಾಗಾಟ ವಾಹನದವರು ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ 9ಗಂಟೆ ಹೊತ್ತಿಗೆ ಕಾಡಾನೆ 7ನೇ ತಿರುವಿನ ಬಳಿ ವಾಹನ ಸವಾರರಿಗೆ ಕಂಡು ಬಂದಿದೆ. ಸಲಗವು ರಸ್ತೆ ದಾಟುತ್ತಿದ್ದ ಕಾರಣ ಎರಡು ಕಡೆ ಸ್ವಲ್ಪ ಹೊತ್ತು ವಾಹನಗಳು ಸಾಲುಗಟ್ಟಿ ನಿಂತವು. ಈ ವೇಳೆ ವಾಹನ ಸವಾರರು ನಿರಂತರ ಹಾರ್ನ್ ಬಾರಿಸಿ ಕೆಲವರು ಫೋಟೋ ತೆಗೆಯಲು ಮುಂದಾದಾಗ ಆನೆ ಒಂದಿಷ್ಟು ಆಕ್ರೋಶಗೊಂಡ ಘಟನೆ ನಡೆದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಾಟಿ ರಸ್ತೆ ಬದಿ ಒಂಟಿ ಸಲಗ ಕಂಡುಬಂದಿರುವುದು ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.

ಒಂಟಿ ಸಲಗ ಘಾಟಿ ಪರಿಸರದಲ್ಲಿ ಸಂಚರಿಸುತ್ತಿರುವ ಕುರಿತು ಚಾರ್ಮಾಡಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಗೆ ವಾಹನ ಸವಾರರು ಮಾಹಿತಿ ನೀಡಿದ್ದು ಇಲ್ಲಿನ ಸಿಬ್ಬಂದಿ ಘಾಟಿ ಪ್ರದೇಶಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾಡಾನೆ ಕಂಡು ಬರದಿದ್ದರೂ ಅದು ಸಂಚರಿಸಿದ ಕುರುಹುಗಳು ಕಂಡುಬಂದಿವೆ.

ಎಚ್ಚರಿಕೆ.
ಚಾರ್ಮಾಡಿ ಘಾಟಿ ಪರಿಸರವು ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿ ಹಲವಾರು ವನ್ಯಜೀವಿಗಳು ವಾಸಿಸುತ್ತವೆ. ಸಾಮಾನ್ಯವಾಗಿ ರಾತ್ರಿ ವೇಳೆ ರಸ್ತೆಯ ಅಲ್ಲಲ್ಲಿ ಆಗಾಗ ಇವು ವಾಹನ ಸವಾರರಿಗೆ ಕಾಣಿಸಿಗುತ್ತವೆ.ಆದರೆ ಇದೀಗ ಹಗಲಿನ ವೇಳೆ ಕಾಡಾನೆ ರಸ್ತೆಯಲ್ಲಿ ಸಂಚರಿಸುವುದು ಕಂಡುಬಂದಿದೆ. ಈ ಕಾರಣದಿಂದ ವಾಹನ ಸವಾರರು ಹೆಚ್ಚಿನ ಮುಂಜಾಗ್ರತೆಯಿಂದ ಘಾಟಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

ಘಾಟಿ ಪರಿಸರದಲ್ಲಿ ಇತ್ತೀಚೆಗೆ ಕಾಡ್ಗಿಚ್ಚು ಕಂಡುಬಂದಿದ್ದು, ಈ ವೇಳೆ ಹಲವಾರು ವನ್ಯಮೃಗಗಳು ತಮ್ಮ ನೆಲೆಯನ್ನು ಕಳೆದುಕೊಂಡಿವೆ. ಅಲ್ಲದೆ ಬಿರು ಬೇಸಿಗೆಯ ಪರಿಣಾಮ ಕಾಡುಪ್ರಾಣಿಗಳಿಗೆ ನೀರಿನ ಅಭಾವವು ಇರುವುದರಿಂದ ಇವು ಘಾಟಿಯುವುದಕ್ಕೂ ನೀರು, ಆಹಾರ ಅರಸಿ ಸಂಚರಿಸುತ್ತಿರುವ ಸಾಧ್ಯತೆ ಇದೆ.

See also  ಸಹಕಾರ ಇಲಾಖೆ ನಿರೀಕ್ಷಕರು ಹುದ್ದೆಗಳ ಆನ್‌ಲೈನ್‌ ಅರ್ಜಿ

Leave a Reply

Your email address will not be published. Required fields are marked *

error: Content is protected !!