ನೆಲ್ಯಾಡಿ: ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ; ಅಡಿಕೆ,ಬಾಳೆ ಕೃಷಿ ಧ್ವಂಸ

ಶೇರ್ ಮಾಡಿ

ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ಸಮೀಪದ ಕುಂಡಡ್ಕ ಎಂಬಲ್ಲಿ ಮೇ 4ರ ರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.

ಕುಂಡಡ್ಕ ಲಕ್ಷ್ಮೀನಾರಾಯಣ ಶೆಟ್ಟಿ, ಚಂದ್ರಹಾಸ ಶೆಟ್ಟಿ ಎಂಬವರ ಅಡಿಕೆ ತೋಟಕ್ಕೆ ದಾಳಿ ಮಾಡಿದ ಕಾಡಾನೆಗಳು ಅಡಿಕೆ ಕೃಷಿ ಹಾಗೂ ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ. ಪದೇ ಪದೇ ಈ ರೀತಿಯ ದಾಳಿಯಿಂದ ಕೃಷಿಕರಿಗೆ ತೊಂದರೆ ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ, ಕೃಷಿ ನಷ್ಟದ ಬಗ್ಗೆ ಸರ್ಕಾರದಿಂದ ಸಿಗುವ ಪರಿಹಾರ ದೊರಕಿಸಿಕೊಡುವಲ್ಲಿ ಕೈಗೊಳ್ಳಬೇಕಾಗಿದೆ.

Leave a Reply

error: Content is protected !!