ದ.ಕ ಜಿಲ್ಲೆಯ ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಎನ್ ಐಟಿಕೆಯ ಕೇಂದ್ರ ಗ್ರಂಥಾಲಯದಲ್ಲಿ ಭದ್ರವಾಗಿದೆ

ಶೇರ್ ಮಾಡಿ

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಎನ್ ಐಟಿಕೆಯ ಕೇಂದ್ರ ಗ್ರಂಥಾಲಯದಲ್ಲಿ ನಿರ್ಮಿಸಲಾಗಿರುವ ಭದ್ರತಾ ಕೊಠಡಿಯಲ್ಲಿ ಭದ್ರವಾಗಿದೆ.

ಭದ್ರತಾ ಕೊಠಡಿಗೆ ಚುನಾವಣಾ ಆಯೋಗದ ನಿರ್ದೇಶನದಂತೆ ಮೂರು ಪಾಳಿಯಲ್ಲಿ ಸಿ ಆರ್ ಪಿ ಎಫ್ ಜವಾನರನ್ನು ನಿಯೋಜಿಸಲಾಗಿದೆ. ಜೊತೆಗೆ ಚುನಾವಣಾ ಆಯೋಗದ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಸದ್ಯ ಎನ್ ಐಟಿಕೆ ಅಲ್ಲಿ ನಿರ್ಮಿಸಲಾಗಿರುವ ಭದ್ರತಾ ಕೊಠಡಿಯ ಬಳಿಗೆ ಯಾವುದೇ ರಾಜಕೀಯ ಪಕ್ಷಗಳ ನೇತಾರರು ಸೇರಿದಂತೆ ಯಾವೊಬ್ಬರಿಗೂ ಅವಕಾಶ ನೀಡಲಾಗುತ್ತಿಲ್ಲ. ಎನ್ಐಟಿಕೆ ಆವರಣದ ಸುತ್ತ ಸುರತ್ಕಲ್ ಪೊಲೀಸರು ಮತ್ತು ಸಿ ಆರ್ ಪಿ ಎಫ್ ಜವಾನರನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಭದ್ರತಾ ಕೊಠಡಿಯಲ್ಲಿ ಭದ್ರ ಆಗಿರುವ ವಿವಿಧ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯವೂ ಮೇ 13ರ ಶನಿವಾರದಂದು ಹೊರಬೀಳಲಿದೆ.
ಮತ ಎಣಿಕೆಯ ಸಂದರ್ಭ ಜಿಲ್ಲಾಡಳಿತದಿಂದ ಅನುಮತಿ ಪಡೆದಿರುವ ಪತ್ರಕರ್ತರು ಹಾಗೂ ಅಭ್ಯರ್ಥಿಗಳ ಏಜೆಂಟರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.

Leave a Reply

error: Content is protected !!