![](https://i0.wp.com/nesaranewsworld.com/wp-content/uploads/2023/05/TUTORIYAL.jpg?resize=765%2C429&ssl=1)
![](https://i0.wp.com/nesaranewsworld.com/wp-content/uploads/2023/05/WhatsApp-Image-2023-04-24-at-10.10.40.jpg?resize=447%2C596&ssl=1)
![](https://i0.wp.com/nesaranewsworld.com/wp-content/uploads/2023/04/WhatsApp-Image-2023-04-23-at-20.18.23.jpg?resize=448%2C643&ssl=1)
![](https://i0.wp.com/nesaranewsworld.com/wp-content/uploads/2023/04/coumputer-add.jpg?resize=452%2C254&ssl=1)
ನೆಲ್ಯಾಡಿ: ರಾಮನಗರ ಅವೆತ್ತಿಮಾರು ಗುತ್ತುವಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಒಂದರಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಅಮೆತ್ತಿಮಾರು ಗುತ್ತು ಗಂಗಾಧರ ಶೆಟ್ಟಿ ಹೊಸಮನೆ ರವರ ನೇತೃತ್ವದಲ್ಲಿ ದಾನಿಗಳ ನೆರವಿನೊಂದಿಗೆ ಸುಮಾರು 100 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
![](https://i0.wp.com/nesaranewsworld.com/wp-content/uploads/2023/06/WhatsApp-Image-2023-06-01-at-6.53.11-PM.jpeg?resize=963%2C480&ssl=1)
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಮಾಜಿಕ ಮುಖಂಡ ಸೀತಾರಾಮ ಗೌಡ ಕಾನಮನೆ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಿ ಮಾತನಾಡಿ ಈ ಕಾರ್ಯ ಬಹಳ ಪುಣ್ಯದ ಕೆಲಸವಾಗಿದೆ ವಿದ್ಯಾರ್ಥಿಗಳು ಕಠಿಣ ಪರಿಶ್ರಮವನ್ನು ಮಾಡಿ ಗುರುಗಳನ್ನು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಂಡು ದೇಶಪ್ರೇಮವನ್ನು ಮೈಗೂಡಿಸಿಕೊಂಡು ನಮ್ಮ ಊರಿಗೆ ಕೀರ್ತಿಯನ್ನು ತರಬೇಕು ನಾವು ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸುವ ಸೇವಾ ಮನೋಭಾವವನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
![](https://i0.wp.com/nesaranewsworld.com/wp-content/uploads/2023/06/WhatsApp-Image-2023-06-01-at-6.53.12-PM.jpeg?resize=1021%2C433&ssl=1)
ಕಾರ್ಯಕ್ರಮದ ವ್ಯವಸ್ಥಾಪಕರಾದ ಗಂಗಾಧರ ಶೆಟ್ಟಿ ಹೊಸಮನೆ ರವರು ಪ್ರಾಸ್ತಾವಿಕ ಮಾತನಾಡಿ ಪುಸ್ತಕ ವಿತರಣೆ ಕಾರ್ಯವನ್ನು ಕಳೆದ ಮೂರು ವರ್ಷಗಳಿಂದ ಮಾಡುತ್ತ ಬಂದಿದ್ದೇನೆ ಈ ಕಾರ್ಯವನ್ನು ಪ್ರತಿವರ್ಷ ಇನ್ನಷ್ಟು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ನೀಡುವ ಬಗ್ಗೆ ಆಲೋಚನೆಯನ್ನು ಇಟ್ಟುಕೊಂಡಿದ್ದೇವೆ ನಾವೆಲ್ಲ ಭಾರತಮಾತೆಯ ಮಕ್ಕಳು ಯಾವುದೇ ಜಾತಿ ಮತ ಭೇದವಿಲ್ಲದೆ ಒಗ್ಗಟ್ಟಿನಿಂದ ಈ ಸಮಾಜದಲ್ಲಿ ಬಾಳಿದಾಗ ಮಹಾತ್ಮ ಗಾಂಧಿಯವರ ರಾಮ ರಾಜ್ಯದ ಕಲ್ಪನೆ ಸಾಕಾರಗೊಳ್ಳುತ್ತದೆ ಈ ನೆಟ್ಟಿನಲ್ಲಿ ಎಲ್ಲಾ ಮಕ್ಕಳಿಗೆ ವಿಶೇಷವಾಗಿ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡುವುದರ ಮೂಲಕ ನಾವು ಕಲಿತಂತಹ ವಿದ್ಯೆಗೆ ಮತ್ತು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಮಟ್ಟದಲ್ಲಿ ಕಲಿತಂತಹ ಸಂಸ್ಕಾರ ಇವೆಲ್ಲವುಗಳಿಗೆ ಕೃತಜ್ಞತೆಯನ್ನು ಇಂತಹ ಕಾರ್ಯಗಳನ್ನು ನಾವು ಮಾಡಿದಾಗ ನಮಗೆ ಜೀವನದಲ್ಲಿ ನೆಮ್ಮದಿ ಸಂತೋಷ ಕಾಣಸಿಗುತ್ತದೆ, ನಮ್ಮಲ್ಲಿ ಪ್ರೀತಿ ಇಟ್ಟು ಬಂದಂತಹ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರೀತಿಪೂರ್ವಕ ವಂದನೆಗಳನ್ನು ಸಲ್ಲಿಸುತ್ತಾ ಇದ್ದೇನೆ. ಈ ಪುಸ್ತಕ ವಿತರಣ ಕಾರ್ಯದಲ್ಲಿ ನನ್ನೊಂದಿಗೆ ಕೈಜೋಡಿಸಿದ ದಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಪುಸ್ತಕ ವಿತರಣೆಯಲ್ಲಿ ದಾನಿಗಳಾಗಿ ಪ್ರಗತಿಪರ ಕೃಷಿಕ ಸಾಮಾಜಿಕ ಮುಖಂಡರಾದ ರಮೇಶ ಗೌಡ ನಾಲ್ಗೊತ್ತು ಮತ್ತು ನಲ್ಯಾಡಿ ಸೇವಾ ಸಹಕಾರಿ ಬ್ಯಾಂಕನ ಉದ್ಯೋಗಿ ಮಹೇಶ್ ಗೌಡ. ಮುದಲೆ ಮತ್ತು ನೆಲ್ಯಾಡಿ ಬಾಲಾಜಿ ಮೆಡಿಕಲ್ ನ ಉದಯ್ ಕುಮಾರ್ ಭಟ್ ಸಹಕರಿಸಿದ್ದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಡುಗುಡ್ಡೆ ರಾಜನ್ ದೈವಸ್ಥಾನದ ಗುರಿಕಾರ ಹರ್ಪಳಗುತ್ತು ರಘುನಾಥ ರೈ ಭಾಗವಹಿಸಿದ್ದರು.
![](https://i0.wp.com/nesaranewsworld.com/wp-content/uploads/2023/03/WhatsApp-Image-2023-03-06-at-6.15.00-PM.jpeg?resize=456%2C723&ssl=1)
![](https://i0.wp.com/nesaranewsworld.com/wp-content/uploads/2023/05/Untitled-3.jpg?resize=460%2C818&ssl=1)