ಕಡಬ ತಾಲೂಕು ಪಂಚಾಯತ್ ನಲ್ಲಿ ಅಂತರಾಷ್ಟಿಯ ಜೀವವೈವಿದ್ಯ ದಿನಾಚರಣೆ; ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಗಿಡ ನಾಟಿ

ಶೇರ್ ಮಾಡಿ

ಕಡಬ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಂತರಾಷ್ಟಿಯ ಜೀವ ವೈವಿದ್ಯ ದಿನಾಚರಣೆಯನ್ನು ಕಡಬ ತಾಲೂಕು ಪಂಚಾಯತ್ ಆವರಣದಲ್ಲಿ ಗಿಡ ನಾಟಿ ಮಾಡುವ ಮೂಲಕ ಸೋಮವಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಡಬ ತಹಸೀಲ್ದಾರ್ ರಮೇಶ್ ಬಾಬು, ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೆಂಪೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ನಿರ್ದೆಶಕ ಚೆನ್ನಪ್ಪ ಗೌಡ ಕಜೆಮೂಲೆ, ವ್ಯವಸ್ಥಾಪಕ ಭವನೇಂದ್ರ ಕುಮಾರ್, ಕಾಣಿಯೂರು, ಗ್ರಾಮಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಉದನಡ್ಕ, ಬಿಜೆಪಿ ಮುಖಂಡ ರಾಕೇಶ್ ರೈ ಕೆಡೆಂಜಿ, ಲೋಕೋಪಯೋಗಿ ಇಲಾಖಾ ಇಂಜಿನಿಯರ್‌ಗಳಾದ ಪ್ರಮೋದ್ ಕುಮಾರ್, ಕನಿಷ್ಕ ಆರ್ ಚಂದ್ರ, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಸಂಗಪ್ಪ ಹುಕ್ಕೇರಿ, ಭರತ್ ಕುಮಾರ್, ಭೂಮಾಪನಾ ಇಲಾಖಾ ಅಧಿಕಾರಿ ಚಂದ್ರಶೇಖರ, ಅರಣ್ಯಾಧಿಕಾರಿಗಳಾದ ರಾಘವೇಂದ್ರ ಎಚ್.ಪಿ, ಗಿರೀಶ್, ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!