![](https://i0.wp.com/nesaranewsworld.com/wp-content/uploads/2023/05/TUTORIYAL.jpg?resize=765%2C429&ssl=1)
![](https://i0.wp.com/nesaranewsworld.com/wp-content/uploads/2023/05/WhatsApp-Image-2023-04-24-at-10.10.40.jpg?resize=447%2C596&ssl=1)
![](https://i0.wp.com/nesaranewsworld.com/wp-content/uploads/2023/04/WhatsApp-Image-2023-04-23-at-20.18.23.jpg?resize=448%2C643&ssl=1)
ಕುಂದಾಪುರ: ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗಿಗೆ ಭಕ್ತರ ಸೋಗಿನಲ್ಲಿ ಬಂದ ಕಳ್ಳರು ಕನ್ನ ಹಾಕಿದ್ದಾರೆ.
![](https://i0.wp.com/nesaranewsworld.com/wp-content/uploads/2023/06/download-1.jpeg?resize=544%2C378&ssl=1)
ಮೂಲತಃ ಕೇರಳ ರಾಜ್ಯದ ಹಣಂಗೊರು ಶಾರದ ನಗರದ ನಿವಾಸಿಗಳಾದ ಪ್ರವೀಣ ಎಂಬುವರು ತನ್ನ ಪತ್ನಿ ವಾಣಿಶ್ರೀ ಹಾಗೂ ಮಕ್ಕಳೊಂದಿಗೆ ಸುರತ್ಕಲ್ ನಲ್ಲಿ ವಾಸವಾಗಿದ್ದರು. ಭಾನುವಾರ ಕೊಲ್ಲೂರು ದೇವಸ್ಥಾನಕ್ಕೆ ಬರುವಾಗ ಮನೆಯಲ್ಲಿ ಯಾರೂ ಇಲ್ಲದ ಕಾರಣ 13½ ಪವನ್ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿ ಇಟ್ಟುಕೊಂಡು ಬಂದಿದ್ದರು. ಬೆಳಿಗ್ಗೆ 11-00 ಗಂಟೆಗೆ ದೇವರ ದರ್ಶನ ಮಾಡಿ ಬೆಳಿಗ್ಗೆ 11-30 ಗಂಟೆಗೆ ದೇವಸ್ಥಾನದ ಹೊರಗಡೆ ಬಂದಾಗ ಪ್ರವೀಣ ಅವರ ಹೆಂಡತಿಯ ವ್ಯಾನಟಿ ಬ್ಯಾಗ್ ನ ಜೀಪ್ ಓಪನ್ ಆಗಿತ್ತೆನ್ನಲಾಗಿದೆ.
ತಕ್ಷಣ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿದ್ದು ಬೆಳಕಿಗೆ ಬಂದಿದೆ. ಅದಾಗಲೇ ಭಕ್ತರ ಸೋಗಿನಲ್ಲಿದ್ದ ಕಳ್ಳರು ವಾಣಿಶ್ರೀ ಬ್ಯಾಗಿಗೆ ಕನ್ನ ಹಾಕಿದ್ದರು. ಚಿಕ್ಕ ಪರ್ಸ್ ನಲ್ಲಿದ್ದ 7½ ಪವನ್ ಚಿನ್ನದ ಚೈನ್ -1, 1½ ಪವನ್ ಚಿನ್ನದ ಬಳೆ -2 ಒಟ್ಟು 3 ಪವನ್, 1½ ಪವನ್ ಚಿನ್ನದ ಚೈನ್ -1, ½ ಪವನ್ ಚಿನ್ನದ ಬಳೆ-1, 4 ಜೊತೆ ಚಿನ್ನದ ಕಿವಿ ಓಲೆ ಒಟ್ಟು -1 ಪವನ್ ಎಲ್ಲಾ ಒಟ್ಟು 13½ ಪವನ್ (108 ಗ್ರಾಂ) ಸೇರಿದಂತೆ ಒಟ್ಟು ಅಂದಾಜು ಮೌಲ್ಯ 4 ಲಕ್ಷದ 75 ಸಾವಿರ ರೂಪಾಯಿ ಚಿನ್ನಾಭರಣ ಸ್ವತ್ತುಗಳನ್ನು ಕದ್ದೊಯ್ದಿದ್ದಾರೆ.
ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://i0.wp.com/nesaranewsworld.com/wp-content/uploads/2023/03/WhatsApp-Image-2023-03-06-at-6.15.00-PM.jpeg?resize=456%2C723&ssl=1)
![](https://i0.wp.com/nesaranewsworld.com/wp-content/uploads/2023/05/Untitled-3.jpg?resize=460%2C818&ssl=1)