ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ನೇಮಕ

ಶೇರ್ ಮಾಡಿ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಅವರನ್ನು ನೇಮಕ ಮಾಡಲಾಗಿದೆ.

“ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಕ ಮಾಡಿ ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ ವಿ ಅಶೋಕ ಅವರು ಆದೇಶದಲ್ಲಿ ಹೊರಡಿಸಿದ್ದಾರೆ.

Leave a Reply

error: Content is protected !!