ಸೌತಡ್ಕ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ

ಶೇರ್ ಮಾಡಿ

ನೇಸರ ಜ.8: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ನಾಯ್ಕ್ ರವರ 16 ಲಕ್ಷ ಅನುದಾನದಲ್ಲಿ ನಿರ್ಮಾಣವಾದ ನೂತನ ಅಂಗನವಾಡಿ ಕಟ್ಟಡದ ಪ್ರವೇಶ ಕಾರ್ಯಕ್ರಮ ಜ.7ರಂದು ನಡೆಯಿತು.

ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರದ ಪ್ರಧಾನ ಅರ್ಚಕ ಸತ್ಯಪ್ರಿಯ ರವರು ಗಣ ಹೋಮವನ್ನು ನೆರವೇರಿಸಿದರು.
ದೀಪ ಪ್ರಜ್ವಲಿಸುವ ಮೂಲಕ ಅಂಗನವಾಡಿ ಕೇಂದ್ರವನ್ನು ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗೀಶ್ ಅಲಂಬಿಲ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕೊಕ್ಕಡ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಪೂಜಾ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ,ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ,ಕೊಕ್ಕಡ ಪಂಚಾಯತ್ ಉಪಾಧ್ಯಕ್ಷೆ ಪವಿತ್ರ, ಸದಸ್ಯರುಗಳಾದ ಪ್ರಭಾಕರ್ ಮಲ್ಲಿಗೆಮನೆ, ಬೇಬಿ, ಲತಾ, ಜಗದೀಶ್ ಕೆಂಪಕೊಡಿ, ಪುರುಷೋತ್ತಮ್, ಅಂಗನವಾಡಿ ಮೇಲ್ವಿಚಾರಕಿ ವಿನೋದ,ಅಂಗನವಾಡಿ ಕಾರ್ಯಕರ್ತೆ ಸರಿತಾ,ಆಶಾ ಕಾರ್ಯಕರ್ತರು, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Leave a Reply

error: Content is protected !!